ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್ನ ಕೀಯನ್ನು ಹಸ್ತಾಂತರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.
ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…