Advertisement
ಪ್ರಮುಖ

#Kasaragod | ಕಾಸರಗೋಡು ಕನ್ನಡ ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ ಹೈಕೋರ್ಟ್ | ಶಾಲೆಗೆ, ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ | ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ |

Share

ಕಾಸರಗೋಡು ಭೌಗೋಳಿಕವಾಗಿ ಕೇರಳಕ್ಕೆ ಸೇರಿದ್ದರೂ, ಅಲ್ಲಿನ ಜನ  ಕನ್ನಡವನ್ನೆ ಉಸಿರಾಡುತ್ತಿದ್ದಾರೆ. ಹಾಗಾಗಿ ಈ ಕನ್ನಡ ಭಾಷೆ ಮತ್ತು ಮಲಯಾಳಂ ಭಾಷೆ ಮಧ್ಯೆ ಸದಾ ಸಿಕ್ಕಿಕೊಳ್ಳುವವರು ಮಕ್ಕಳು. ಕನ್ನಡದ ಮಕ್ಕಳ ಪಾಲಿಗೆ ಮಲಯಾಳಂ ಕಬ್ಬಿಣದ ಕಡಲೆಯಾಗಿದೆ. ಕನ್ನಡ ಗೊತ್ತಿಲ್ಲದ ಶಿಕ್ಷಕರನ್ನು ನೇಮಿಸಿ, ಕನ್ನಡದ ಮಕ್ಕಳು ತಲೆ ಬಡಿದುಕೊಳ್ಳುವ ಪರಿಸ್ಥಿತಿ ಇತ್ತು. ಈ ಸಮಸ್ಯೆಗೆ ಈಗ ಕೇರಳ ಹೈಕೋರ್ಟ್ ಅಂತ್ಯ ಹಾಡಿದೆ.

ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಸರ್ಕಾರಿ ಹೈಯರ್‌ ಸೆಕೆಂಡರಿ ಶಾಲೆ ಕನ್ನಡ ವಿಭಾಗಕ್ಕೆ ಮಲಯಾಳ ಶಿಕ್ಷಕಿ ನೇಮಕ ವಿವಾದಕ್ಕೆ ಕೇರಳ ಹೈಕೋರ್ಟ್‌ ಅಂತ್ಯವಾಡಿದೆ. ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುತ್ತಿದೆ ಎಂದು ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಸರಗೋಡಿನ ಅಡೂರು ಶಾಲೆಗೆ ಮಲೆಯಾಳ ಶಿಕ್ಷಕಿ ನೇಮಕದಿಂದಾಗಿ ಸುಮಾರು ಎರಡು ತಿಂಗಳಿಂದ ಕನ್ನಡ ವಿಭಾಗದ ಮಕ್ಕಳಿಗೆ ಸಮಾಜ ವಿಜ್ಞಾನ ಪಾಠವೇ ಇಲ್ಲ ಎಂಬಂತಾಗಿತ್ತು. ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳ ಭಾಷೆ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಉದುಮ ಪ್ರೌಢಶಾಲೆಗೆ ಕೂಡ ಇದೇ ರೀತಿ ಶಿಕ್ಷಕಿ ನೇಮಕಗೊಂಡಿದ್ದರು. ಕೇರಳ ಲೋಕಸೇವಾ ಆಯೋಗ ಈ ನೇಮಕಾತಿ ನಡೆಸಿತ್ತು. ಉದುಮ ಹಾಗೂ ಅಡೂರು ಶಾಲೆಗಳಿಗೆ ಮಲಯಾಳ ಭಾಷಿಕ ಶಿಕ್ಷಕರ ನೇಮಕವಾದಾಗ ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿದಂತೆ ಗಡಿನಾಡಿನ ಕನ್ನಡ ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಈ ಕುರಿತು ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್‌ ತೀರ್ಪು ನೀಡಿರುವುದು ಗಡಿನಾಡ ಕನ್ನಡಿಗರ ಹೋರಾಟಕ್ಕೆ ದಕ್ಕಿದ ಜಯವಾಗಿದೆ. ಆದರೆ ಕೇರಳ ಹೈಕೋರ್ಟ್‌ನ ಈ ತೀರ್ಪನ್ನು ಎಲ್ಲ ಕನ್ನಡ ಮಾಧ್ಯಮ ಶಾಲೆಗಳಿಗೆ ಅನ್ವಯಿಸುವಂತೆವಾದ ಮಂಡಿಸಿದ್ದು ಸ್ವಾಗತಾರ್ಹವಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಹೇಳಿದ್ದಾರೆ.

ಕಾಸರಗೋಡಿನ ಕನ್ನಡಿಗರ ಹೋರಾಟಕ್ಕೆ ಕೇರಳ ಹೈಕೋರ್ಟ್‌ನಲ್ಲಿ ಮಹತ್ವದ ಜಯ ಲಭಿಸಿದ್ದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಮಲಯಾಳಿ ಭಾಷಿಕ ಶಿಕ್ಷಕಿಗೆ ಕನ್ನಡದಲ್ಲಿ ವ್ಯವಹರಿಸಲು ತಿಳಿಯದು ಎಂಬುದನ್ನು ಅರ್ಥೈಸಿಕೊಂಡಿರುವ ನ್ಯಾಯಾಲಯ, ಕೂಡಲೇ ಆ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಿ ತಕ್ಷಣವೇ ಅವರ ಸ್ಥಾನಕ್ಕೆ ಕನ್ನಡ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವುದು ಪ್ರಾದೇಶಿಕ ಭಾಷೆಗೆ ನ್ಯಾಯಾಲಯ ನೀಡಿದ ಗೌರವವಾಗಿದೆ. ಈ ಮೂಲಕ ಅನೇಕ ವರ್ಷಗಳಿಂದ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವ ಕೇರಳ ಸರ್ಕಾರಕ್ಕೆ, ಕೇರಳ ಶಿಕ್ಷಣ ಇಲಾಖೆ ಮತ್ತು ಕೇರಳ ಲೋಕಸೇವಾ ಆಯೋಗಕ್ಕೆ ಪ್ರಸ್ತುತ ತೀರ್ಪುನ ಮೂಲಕ ಕೇರಳ ಹೈಕೋರ್ಟ್‌ ಚಾಟಿ ಬೀಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತಿಳಿಸಿದ್ದಾರೆ.

Source: Online

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

7 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

14 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

22 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

23 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago