ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿ ಭೇಟಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕಾರ |

June 13, 2024
8:32 PM
ಶಬರಿಮಲೆ ಯಾತ್ರೆಗೆ ತೆರಳಲು 10 ವರ್ಷದ ಬಾಲಕಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದೆ.

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿಗೆ ಭೇಟಿ ನೀಡಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ.
2018ರ ಶಬರಿಮಲೆ ಪ್ರವೇಶ ನಿರ್ಬಂಧಗಳ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ 10 ವರ್ಷದ ಬಾಲಕಿಯ ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.ಇತ್ತೀಚೆಗಷ್ಟೇ 10 ವರ್ಷದ ಬಾಲಕಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು.

ದೇಶದ ಪ್ರಸಿದ್ಧ  ದೇವಾಲಯವಾದ ಶಬರಿಮಲೆ ಪ್ರವೇಶವನ್ನು  10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ನಿಷೇಧಿಸಲಾಗಿದೆ. ಸಾಮಾನ್ಯವಾಗಿ ಋತುಚಕ್ರದ ವಯಸ್ಸಿನ ಮಹಿಳೆಯರು ಮತ್ತು ಹುಡುಗಿಯರ ಪ್ರವೇಶವನ್ನು ನಿಷೇಧಿಸುವ ಕ್ರಮವಾಗಿದೆ ಎನ್ನುವುದು ಈ ಹಿಂದೆಯೇ ತಿಳಿಸಲಾಗಿದೆ. ಆದರೆ,  2018ರಲ್ಲಿ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ವಯೋಮಾನದ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಹೇಳಿತ್ತು.ಆದರೆ, ಈ ತೀರ್ಪನ್ನು ಪ್ರಶ್ನಿಸುವ ಮರುಪರಿಶೀಲನಾ ಅರ್ಜಿಯು ಉನ್ನತ ನ್ಯಾಯ ಪೀಠದ ಮುಂದೆ ಬಾಕಿ ಉಳಿದಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಹರಿಶಂಕರ್ ವಿ ಮೆನನ್ ಅವರ ವಿಭಾಗೀಯ ಪೀಠವು ಉನ್ನತ ನ್ಯಾಯಾಲಯದಲ್ಲಿನ ಪರಿಶೀಲನಾ ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯಕ್ಕೆ ಪ್ರವೇಶಿಸಲು 10 ವರ್ಷದ ಬಾಲಕಿಯ ಮನವಿಯನ್ನು ವಜಾಗೊಳಿಸಿದೆ.

ಶಬರಿಮಲೆಗೆ ಭೇಟಿ ನೀಡುವ ಆನ್‌ಲೈನ್ ಅರ್ಜಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿ ತಿರಸ್ಕರಿಸಿದ ನಂತರ  ಬಾಲಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಪ್ರೌಢಾವಸ್ಥೆಗೆ ಬಂದ ಹುಡುಗಿಯರ ಪ್ರವೇಶ ನಿಷೇಧಕ್ಕಾಗಿ 10 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದು ಅವರ ಪ್ರಾಥಮಿಕ ವಾದವಾಗಿತ್ತು. ತಾನು ಪ್ರೌಢಾವಸ್ಥೆಗೆ ಬಂದಿಲ್ಲವಾದ್ದರಿಂದ ಶಬರಿಮಲೆ ಯಾತ್ರೆಯಲ್ಲಿ ಭಾಗವಹಿಸಲು ಅರ್ಹಳಾಗಿದ್ದೇನೆ ಎಂದು ವಾದಿಸಿದ್ದರು.

A 10-year-old girl’s plea to undertake a pilgrimage to the Sabarimala temple during the Mandala-Makaravilakku season is denied by the high court.

Source: The Hindu

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror