Advertisement
ಸುದ್ದಿಗಳು

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿ ಭೇಟಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕಾರ |

Share

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿಗೆ ಭೇಟಿ ನೀಡಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ.
2018ರ ಶಬರಿಮಲೆ ಪ್ರವೇಶ ನಿರ್ಬಂಧಗಳ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ 10 ವರ್ಷದ ಬಾಲಕಿಯ ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.ಇತ್ತೀಚೆಗಷ್ಟೇ 10 ವರ್ಷದ ಬಾಲಕಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು.

ದೇಶದ ಪ್ರಸಿದ್ಧ  ದೇವಾಲಯವಾದ ಶಬರಿಮಲೆ ಪ್ರವೇಶವನ್ನು  10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ನಿಷೇಧಿಸಲಾಗಿದೆ. ಸಾಮಾನ್ಯವಾಗಿ ಋತುಚಕ್ರದ ವಯಸ್ಸಿನ ಮಹಿಳೆಯರು ಮತ್ತು ಹುಡುಗಿಯರ ಪ್ರವೇಶವನ್ನು ನಿಷೇಧಿಸುವ ಕ್ರಮವಾಗಿದೆ ಎನ್ನುವುದು ಈ ಹಿಂದೆಯೇ ತಿಳಿಸಲಾಗಿದೆ. ಆದರೆ,  2018ರಲ್ಲಿ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ವಯೋಮಾನದ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಹೇಳಿತ್ತು.ಆದರೆ, ಈ ತೀರ್ಪನ್ನು ಪ್ರಶ್ನಿಸುವ ಮರುಪರಿಶೀಲನಾ ಅರ್ಜಿಯು ಉನ್ನತ ನ್ಯಾಯ ಪೀಠದ ಮುಂದೆ ಬಾಕಿ ಉಳಿದಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಹರಿಶಂಕರ್ ವಿ ಮೆನನ್ ಅವರ ವಿಭಾಗೀಯ ಪೀಠವು ಉನ್ನತ ನ್ಯಾಯಾಲಯದಲ್ಲಿನ ಪರಿಶೀಲನಾ ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯಕ್ಕೆ ಪ್ರವೇಶಿಸಲು 10 ವರ್ಷದ ಬಾಲಕಿಯ ಮನವಿಯನ್ನು ವಜಾಗೊಳಿಸಿದೆ.

ಶಬರಿಮಲೆಗೆ ಭೇಟಿ ನೀಡುವ ಆನ್‌ಲೈನ್ ಅರ್ಜಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿ ತಿರಸ್ಕರಿಸಿದ ನಂತರ  ಬಾಲಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಪ್ರೌಢಾವಸ್ಥೆಗೆ ಬಂದ ಹುಡುಗಿಯರ ಪ್ರವೇಶ ನಿಷೇಧಕ್ಕಾಗಿ 10 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದು ಅವರ ಪ್ರಾಥಮಿಕ ವಾದವಾಗಿತ್ತು. ತಾನು ಪ್ರೌಢಾವಸ್ಥೆಗೆ ಬಂದಿಲ್ಲವಾದ್ದರಿಂದ ಶಬರಿಮಲೆ ಯಾತ್ರೆಯಲ್ಲಿ ಭಾಗವಹಿಸಲು ಅರ್ಹಳಾಗಿದ್ದೇನೆ ಎಂದು ವಾದಿಸಿದ್ದರು.

A 10-year-old girl’s plea to undertake a pilgrimage to the Sabarimala temple during the Mandala-Makaravilakku season is denied by the high court.

Source: The Hindu

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

6 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

8 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

14 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

14 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

22 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

22 hours ago