Advertisement
ಸುದ್ದಿಗಳು

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿ ಭೇಟಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕಾರ |

Share

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿಗೆ ಭೇಟಿ ನೀಡಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ.
2018ರ ಶಬರಿಮಲೆ ಪ್ರವೇಶ ನಿರ್ಬಂಧಗಳ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ 10 ವರ್ಷದ ಬಾಲಕಿಯ ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.ಇತ್ತೀಚೆಗಷ್ಟೇ 10 ವರ್ಷದ ಬಾಲಕಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು.

ದೇಶದ ಪ್ರಸಿದ್ಧ  ದೇವಾಲಯವಾದ ಶಬರಿಮಲೆ ಪ್ರವೇಶವನ್ನು  10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ನಿಷೇಧಿಸಲಾಗಿದೆ. ಸಾಮಾನ್ಯವಾಗಿ ಋತುಚಕ್ರದ ವಯಸ್ಸಿನ ಮಹಿಳೆಯರು ಮತ್ತು ಹುಡುಗಿಯರ ಪ್ರವೇಶವನ್ನು ನಿಷೇಧಿಸುವ ಕ್ರಮವಾಗಿದೆ ಎನ್ನುವುದು ಈ ಹಿಂದೆಯೇ ತಿಳಿಸಲಾಗಿದೆ. ಆದರೆ,  2018ರಲ್ಲಿ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ವಯೋಮಾನದ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಹೇಳಿತ್ತು.ಆದರೆ, ಈ ತೀರ್ಪನ್ನು ಪ್ರಶ್ನಿಸುವ ಮರುಪರಿಶೀಲನಾ ಅರ್ಜಿಯು ಉನ್ನತ ನ್ಯಾಯ ಪೀಠದ ಮುಂದೆ ಬಾಕಿ ಉಳಿದಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಹರಿಶಂಕರ್ ವಿ ಮೆನನ್ ಅವರ ವಿಭಾಗೀಯ ಪೀಠವು ಉನ್ನತ ನ್ಯಾಯಾಲಯದಲ್ಲಿನ ಪರಿಶೀಲನಾ ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯಕ್ಕೆ ಪ್ರವೇಶಿಸಲು 10 ವರ್ಷದ ಬಾಲಕಿಯ ಮನವಿಯನ್ನು ವಜಾಗೊಳಿಸಿದೆ.

ಶಬರಿಮಲೆಗೆ ಭೇಟಿ ನೀಡುವ ಆನ್‌ಲೈನ್ ಅರ್ಜಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿ ತಿರಸ್ಕರಿಸಿದ ನಂತರ  ಬಾಲಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಪ್ರೌಢಾವಸ್ಥೆಗೆ ಬಂದ ಹುಡುಗಿಯರ ಪ್ರವೇಶ ನಿಷೇಧಕ್ಕಾಗಿ 10 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದು ಅವರ ಪ್ರಾಥಮಿಕ ವಾದವಾಗಿತ್ತು. ತಾನು ಪ್ರೌಢಾವಸ್ಥೆಗೆ ಬಂದಿಲ್ಲವಾದ್ದರಿಂದ ಶಬರಿಮಲೆ ಯಾತ್ರೆಯಲ್ಲಿ ಭಾಗವಹಿಸಲು ಅರ್ಹಳಾಗಿದ್ದೇನೆ ಎಂದು ವಾದಿಸಿದ್ದರು.

A 10-year-old girl’s plea to undertake a pilgrimage to the Sabarimala temple during the Mandala-Makaravilakku season is denied by the high court.

Source: The Hindu

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

13 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

13 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago