ಸುದ್ದಿಗಳು

ಕೇರಳದ ಎರಡು ರೈಲ್ವೇ ಮಾರ್ಗದ ಪ್ರಸ್ತಾವನೆಗೆ ಕರ್ನಾಟಕ ತಿರಸ್ಕಾರ | ಕಾರಣ ಪರಿಸರ ಸಂರಕ್ಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳ ಸರ್ಕಾರ ಬೇಡಿಕೆ ಇರಿಸಿದ್ದ ಎರಡು ರೈಲ್ವೇ ಮಾರ್ಗದ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರ ಪರಿಸರದ ಕಾರಣದಿಂದ ತಿರಸ್ಕಾರ ಮಾಡಿದೆ. ಪರಿಸರ, ನಮ್ಮ ನೆಲ, ಜಲ ಸಂರಕ್ಷಣೆಗೆ ಆದ್ಯತೆ ನೀಡಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Advertisement
Advertisement

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತುಕತೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು.ಕೇರಳದಿಂದ ನಾಗರಹೊಳೆ, ಬಂಡೀಪುರ ಮಾರ್ಗವಾಗಿ ರೈಲು ಮಾರ್ಗ ಹಾಗೂ ಕಾಂಞಗಾಡ್‌ -ಕಾಣಿಯೂರು ರೈಲು ಮಾರ್ಗದ ಪ್ರಸ್ತಾವನೆ ಇತ್ತು. ಆದರೆ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಬರುವ ಈ ಎರಡೂ ರೈಲ್ವೆ ಮಾರ್ಗ ನಿರ್ಮಾಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರಸ್ಕಾರ ಮಾಡಿದ್ದಾರೆ.  ಪರಿಸರ, ಸಂಪತ್ತಿನ ರಕ್ಷಣೆ ವಿಚಾರದಲ್ಲಿ ಯಾವುದೇ ರೀತಿಯಲ್ಲಿಯೂ ರಾಜಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಂಞಗಾಡ್-ಕಾಣಿಯೂರು ರೈಲು ಮಾರ್ಗವು  45 ಕಿಲೋಮೀಟರ್ ನಷ್ಟು ಮಾರ್ಗ ಬರುತ್ತದೆ. ರಾಜ್ಯದ ವ್ಯಾಪ್ತಿಯಲ್ಲಿ ಬಹುಪಾಲು ರೈಲು ಮಾರ್ಗ ಇಲ್ಲಿ ಇರುತ್ತದೆ.  ಈ ಯೋಜನೆಯನ್ನು ಕೇಂದ್ರ ರೈಲ್ವೆ ಇಲಾಖೆ ತಿರಸ್ಕರಿಸಿತ್ತು. ನಂತರ ಉಭಯ ರಾಜ್ಯದವರು ಒಪ್ಪಿಗೆ ಕೊಟ್ಟರೆ ಪರಿಗಣಿಸುವುದಾಗಿ ತಿಳಿಸಿತ್ತು. ಹಾಗಾಗಿ ವಿಜಯನ್ ಬಂದು ಚರ್ಚಿಸಿದರು‌. ಕಾಂಞಗಾಡ್-ಕಾಣಿಯೂರು ರೈಲು  ಈ ಮಾರ್ಗ ಸುಬ್ರಹ್ಮಣ್ಯ, ಸುಳ್ಯ ಭಾಗದಲ್ಲಿ ಬರುತ್ತದೆ. ಇದು ಪರಿಸರ ಸೂಕ್ಷ್ಮ ವಲಯವಾಗಿದೆ, ಹೀಗಾಗಿ ಎಚ್ಚರಿಕೆ ಅಗತ್ಯವಿದೆ. ಅದೂ ಅಲ್ಲದೆ,  ನಮ್ಮ ರಾಜ್ಯದ ಪ್ರಯಾಣಿಕರಿಗೆ ಲಾಭದಾಯಕವೂ ಅಲ್ಲ. ಇನ್ನೊಂದು ಕೇರಳ ಮೈಸೂರು ರೈಲು ಮಾರ್ಗ, ನಾಗರಹೊಳೆ, ಬಂಡೀಪುರ ಪರಿಸರ ವ್ಯಾಪ್ತಿಗೆ ಬರಲಿದೆ. ಹುಲಿ ಮತ್ತು ಆನೆ ಕಾರಿಡಾರ್ ಇರುವ ಸ್ಥಳವಾಗಿದೆ.  ಹಾಗಾಗಿ ಈ ಯೋಜನೆಯನ್ನು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

1 hour ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

1 hour ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

1 hour ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

4 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

7 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

7 hours ago