Advertisement
ಸುದ್ದಿಗಳು

ಕೇರಳದ ಎರಡು ರೈಲ್ವೇ ಮಾರ್ಗದ ಪ್ರಸ್ತಾವನೆಗೆ ಕರ್ನಾಟಕ ತಿರಸ್ಕಾರ | ಕಾರಣ ಪರಿಸರ ಸಂರಕ್ಷಣೆ |

Share

ಕೇರಳ ಸರ್ಕಾರ ಬೇಡಿಕೆ ಇರಿಸಿದ್ದ ಎರಡು ರೈಲ್ವೇ ಮಾರ್ಗದ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರ ಪರಿಸರದ ಕಾರಣದಿಂದ ತಿರಸ್ಕಾರ ಮಾಡಿದೆ. ಪರಿಸರ, ನಮ್ಮ ನೆಲ, ಜಲ ಸಂರಕ್ಷಣೆಗೆ ಆದ್ಯತೆ ನೀಡಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತುಕತೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು.ಕೇರಳದಿಂದ ನಾಗರಹೊಳೆ, ಬಂಡೀಪುರ ಮಾರ್ಗವಾಗಿ ರೈಲು ಮಾರ್ಗ ಹಾಗೂ ಕಾಂಞಗಾಡ್‌ -ಕಾಣಿಯೂರು ರೈಲು ಮಾರ್ಗದ ಪ್ರಸ್ತಾವನೆ ಇತ್ತು. ಆದರೆ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಬರುವ ಈ ಎರಡೂ ರೈಲ್ವೆ ಮಾರ್ಗ ನಿರ್ಮಾಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರಸ್ಕಾರ ಮಾಡಿದ್ದಾರೆ.  ಪರಿಸರ, ಸಂಪತ್ತಿನ ರಕ್ಷಣೆ ವಿಚಾರದಲ್ಲಿ ಯಾವುದೇ ರೀತಿಯಲ್ಲಿಯೂ ರಾಜಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಂಞಗಾಡ್-ಕಾಣಿಯೂರು ರೈಲು ಮಾರ್ಗವು  45 ಕಿಲೋಮೀಟರ್ ನಷ್ಟು ಮಾರ್ಗ ಬರುತ್ತದೆ. ರಾಜ್ಯದ ವ್ಯಾಪ್ತಿಯಲ್ಲಿ ಬಹುಪಾಲು ರೈಲು ಮಾರ್ಗ ಇಲ್ಲಿ ಇರುತ್ತದೆ.  ಈ ಯೋಜನೆಯನ್ನು ಕೇಂದ್ರ ರೈಲ್ವೆ ಇಲಾಖೆ ತಿರಸ್ಕರಿಸಿತ್ತು. ನಂತರ ಉಭಯ ರಾಜ್ಯದವರು ಒಪ್ಪಿಗೆ ಕೊಟ್ಟರೆ ಪರಿಗಣಿಸುವುದಾಗಿ ತಿಳಿಸಿತ್ತು. ಹಾಗಾಗಿ ವಿಜಯನ್ ಬಂದು ಚರ್ಚಿಸಿದರು‌. ಕಾಂಞಗಾಡ್-ಕಾಣಿಯೂರು ರೈಲು  ಈ ಮಾರ್ಗ ಸುಬ್ರಹ್ಮಣ್ಯ, ಸುಳ್ಯ ಭಾಗದಲ್ಲಿ ಬರುತ್ತದೆ. ಇದು ಪರಿಸರ ಸೂಕ್ಷ್ಮ ವಲಯವಾಗಿದೆ, ಹೀಗಾಗಿ ಎಚ್ಚರಿಕೆ ಅಗತ್ಯವಿದೆ. ಅದೂ ಅಲ್ಲದೆ,  ನಮ್ಮ ರಾಜ್ಯದ ಪ್ರಯಾಣಿಕರಿಗೆ ಲಾಭದಾಯಕವೂ ಅಲ್ಲ. ಇನ್ನೊಂದು ಕೇರಳ ಮೈಸೂರು ರೈಲು ಮಾರ್ಗ, ನಾಗರಹೊಳೆ, ಬಂಡೀಪುರ ಪರಿಸರ ವ್ಯಾಪ್ತಿಗೆ ಬರಲಿದೆ. ಹುಲಿ ಮತ್ತು ಆನೆ ಕಾರಿಡಾರ್ ಇರುವ ಸ್ಥಳವಾಗಿದೆ.  ಹಾಗಾಗಿ ಈ ಯೋಜನೆಯನ್ನು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

18 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago