ರಬ್ಬರ್ ಗೆ 300 ರೂ ಮಾಡಿದ್ರೆ ಬಿಜೆಪಿಗೆ ಬೆಂಬಲ | ಸಂಚಲನ ಸೃಷ್ಟಿಸಿದ ಬಿಷಪ್‌ ಹೇಳಿಕೆ | ಪಿಎಂ, ಕಾಂಗ್ರೆಸ್ ತೀವ್ರ ಟೀಕೆ

March 20, 2023
1:52 PM

ಒಂದು ವೇಳೆ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್ ಬೆಲೆಯನ್ನು ಕೆ.ಜಿ.ಗೆ 300 ರೂ. ಮಾಡಿದರೆ, ಚರ್ಚ್‌ನಲ್ಲಿ ನಂಬಿಕೆ ಇಟ್ಟವರು ಈ ಬಾರಿ ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ನೆರವು ನೀಡಲಿದ್ದಾರೆ ಎಂದು ತಲಶ್ಶೇರಿಯಲ್ಲಿ ಮಾರ್ ಜೋಸೆಫ್ ಪಂಪ್ಲಾನಿ ಹೇಳಿದ್ದಾರೆ.

Advertisement
Advertisement

ಕೇರಳದ ರೋಮನ್ ಕ್ಯಾಥೋಲಿಕ್ ಬಿಷಪ್ ಒಬ್ಬರು ಭಾರತೀಯ ಜನತಾ ಪಕ್ಷದ ಪರವಾಗಿ ಮಾತನಾಡಿದ್ದು, ಅವರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಅವರ ಈ ಹೇಳಿಕೆಗೆ ಭಾರೀ ವಿರೋಧವೂ ವ್ಯಕ್ತವಾಗಿದೆ. ಉತ್ತರ ಕೇರಳದ ತಲಶ್ಶೇರಿಯಲ್ಲಿ ಆಯೋಜಿಸಲಾಗಿದ್ದ ಕ್ಯಾಥೋಲಿಕ್ ರೈತರ ಸಮಾವೇಶದಲ್ಲಿ ಮಾತನಾಡಿದ ಬಿಷಪ್, ದೇಶವನ್ನು ಆಳುತ್ತಿರುವ ಪಕ್ಷವನ್ನು ಚರ್ಚ್‌ಗಳಿಂದ ದೂರ ಇಡುವ ಅಗತ್ಯವಿಲ್ಲ ಎಂದಿದ್ದಾರೆ. ಕೇರಳದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ನೈಸರ್ಗಿಕ ರಬ್ಬರ್‌ಗೆ ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ 130ರಿಂದ 150 ರೂ. ಇದೆ. ಕೇಂದ್ರ ಸರ್ಕಾರವು ಈ ಬೆಲೆಯನ್ನು ಕೆಜಿಗೆ 300 ರೂ.ಗೆ ಏರಿಕೆ ಮಾಡಬೇಕು ಎಂಬುದು ಬಿಷಪ್ ಅವರ ಬೇಡಿಕೆಯಾಗಿದೆ. ಒಂದು ವೇಳೆ, ಈ ಬೇಡಿಕೆಯನ್ನು ಕೇಂದ್ರ ಸರ್ಕಾರವು ಈಡೇರಿಸಿದರೆ, ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ಸಹಜವಾಗಿಯೇ ಚರ್ಚ್ ನೆರವು ನೀಡಲಿದೆ ಎಂದು ಬಿಷಪ್ ಹೇಳಿದ್ದಾರೆ.

Advertisement

ಬಿಜೆಪಿಯ ಕಡೆಗೆ ಚರ್ಚ್ ಎಂದಿಗೂ ಅಸ್ಪೃಶ್ಯತೆಯನ್ನು ಹೊಂದಿಲ್ಲ. ಯಾಕೆಂದರೆ, ಅದು ದೇಶವನ್ನು ಆಳುತ್ತಿರುವ ಪಕ್ಷವಾಗಿದೆ. ಒಂದು ವೇಳೆ, ರೈತರ ಸಮಸ್ಯೆಯನ್ನು ಬಗೆಹರಿಸಿದರೆ, ನಾವು ಬಿಜೆಪಿಗೆ ವೋಟ್ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಷಪ್ ಅವರ ಈ ಹೇಳಿಕೆಗೆ ಸಿಪಿಎಂ ಮತ್ತು ಕಾಂಗ್ರೆಸ್ ಟೀಕಿಸಿವೆ. ಇದೇ ವೇಳೆ, ಬಿಜೆಪಿಯು ಈ ಹೇಳಿಕೆಯನ್ನು ಸ್ವಾಗತಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌
October 5, 2024
9:42 PM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |
October 5, 2024
9:04 PM
by: ದ ರೂರಲ್ ಮಿರರ್.ಕಾಂ
ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |
October 5, 2024
8:43 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |
October 5, 2024
8:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror