Advertisement
ಸುದ್ದಿಗಳು

ರಬ್ಬರ್ ಗೆ 300 ರೂ ಮಾಡಿದ್ರೆ ಬಿಜೆಪಿಗೆ ಬೆಂಬಲ | ಸಂಚಲನ ಸೃಷ್ಟಿಸಿದ ಬಿಷಪ್‌ ಹೇಳಿಕೆ | ಪಿಎಂ, ಕಾಂಗ್ರೆಸ್ ತೀವ್ರ ಟೀಕೆ

Share

ಒಂದು ವೇಳೆ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್ ಬೆಲೆಯನ್ನು ಕೆ.ಜಿ.ಗೆ 300 ರೂ. ಮಾಡಿದರೆ, ಚರ್ಚ್‌ನಲ್ಲಿ ನಂಬಿಕೆ ಇಟ್ಟವರು ಈ ಬಾರಿ ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ನೆರವು ನೀಡಲಿದ್ದಾರೆ ಎಂದು ತಲಶ್ಶೇರಿಯಲ್ಲಿ ಮಾರ್ ಜೋಸೆಫ್ ಪಂಪ್ಲಾನಿ ಹೇಳಿದ್ದಾರೆ.

ಕೇರಳದ ರೋಮನ್ ಕ್ಯಾಥೋಲಿಕ್ ಬಿಷಪ್ ಒಬ್ಬರು ಭಾರತೀಯ ಜನತಾ ಪಕ್ಷದ ಪರವಾಗಿ ಮಾತನಾಡಿದ್ದು, ಅವರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಅವರ ಈ ಹೇಳಿಕೆಗೆ ಭಾರೀ ವಿರೋಧವೂ ವ್ಯಕ್ತವಾಗಿದೆ. ಉತ್ತರ ಕೇರಳದ ತಲಶ್ಶೇರಿಯಲ್ಲಿ ಆಯೋಜಿಸಲಾಗಿದ್ದ ಕ್ಯಾಥೋಲಿಕ್ ರೈತರ ಸಮಾವೇಶದಲ್ಲಿ ಮಾತನಾಡಿದ ಬಿಷಪ್, ದೇಶವನ್ನು ಆಳುತ್ತಿರುವ ಪಕ್ಷವನ್ನು ಚರ್ಚ್‌ಗಳಿಂದ ದೂರ ಇಡುವ ಅಗತ್ಯವಿಲ್ಲ ಎಂದಿದ್ದಾರೆ. ಕೇರಳದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ನೈಸರ್ಗಿಕ ರಬ್ಬರ್‌ಗೆ ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ 130ರಿಂದ 150 ರೂ. ಇದೆ. ಕೇಂದ್ರ ಸರ್ಕಾರವು ಈ ಬೆಲೆಯನ್ನು ಕೆಜಿಗೆ 300 ರೂ.ಗೆ ಏರಿಕೆ ಮಾಡಬೇಕು ಎಂಬುದು ಬಿಷಪ್ ಅವರ ಬೇಡಿಕೆಯಾಗಿದೆ. ಒಂದು ವೇಳೆ, ಈ ಬೇಡಿಕೆಯನ್ನು ಕೇಂದ್ರ ಸರ್ಕಾರವು ಈಡೇರಿಸಿದರೆ, ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ಸಹಜವಾಗಿಯೇ ಚರ್ಚ್ ನೆರವು ನೀಡಲಿದೆ ಎಂದು ಬಿಷಪ್ ಹೇಳಿದ್ದಾರೆ.

ಬಿಜೆಪಿಯ ಕಡೆಗೆ ಚರ್ಚ್ ಎಂದಿಗೂ ಅಸ್ಪೃಶ್ಯತೆಯನ್ನು ಹೊಂದಿಲ್ಲ. ಯಾಕೆಂದರೆ, ಅದು ದೇಶವನ್ನು ಆಳುತ್ತಿರುವ ಪಕ್ಷವಾಗಿದೆ. ಒಂದು ವೇಳೆ, ರೈತರ ಸಮಸ್ಯೆಯನ್ನು ಬಗೆಹರಿಸಿದರೆ, ನಾವು ಬಿಜೆಪಿಗೆ ವೋಟ್ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಷಪ್ ಅವರ ಈ ಹೇಳಿಕೆಗೆ ಸಿಪಿಎಂ ಮತ್ತು ಕಾಂಗ್ರೆಸ್ ಟೀಕಿಸಿವೆ. ಇದೇ ವೇಳೆ, ಬಿಜೆಪಿಯು ಈ ಹೇಳಿಕೆಯನ್ನು ಸ್ವಾಗತಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

4 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

4 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

4 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

13 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

13 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

15 hours ago