Advertisement
ಸುದ್ದಿಗಳು

ರಬ್ಬರ್ ಗೆ 300 ರೂ ಮಾಡಿದ್ರೆ ಬಿಜೆಪಿಗೆ ಬೆಂಬಲ | ಸಂಚಲನ ಸೃಷ್ಟಿಸಿದ ಬಿಷಪ್‌ ಹೇಳಿಕೆ | ಪಿಎಂ, ಕಾಂಗ್ರೆಸ್ ತೀವ್ರ ಟೀಕೆ

Share

ಒಂದು ವೇಳೆ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್ ಬೆಲೆಯನ್ನು ಕೆ.ಜಿ.ಗೆ 300 ರೂ. ಮಾಡಿದರೆ, ಚರ್ಚ್‌ನಲ್ಲಿ ನಂಬಿಕೆ ಇಟ್ಟವರು ಈ ಬಾರಿ ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ನೆರವು ನೀಡಲಿದ್ದಾರೆ ಎಂದು ತಲಶ್ಶೇರಿಯಲ್ಲಿ ಮಾರ್ ಜೋಸೆಫ್ ಪಂಪ್ಲಾನಿ ಹೇಳಿದ್ದಾರೆ.

ಕೇರಳದ ರೋಮನ್ ಕ್ಯಾಥೋಲಿಕ್ ಬಿಷಪ್ ಒಬ್ಬರು ಭಾರತೀಯ ಜನತಾ ಪಕ್ಷದ ಪರವಾಗಿ ಮಾತನಾಡಿದ್ದು, ಅವರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಅವರ ಈ ಹೇಳಿಕೆಗೆ ಭಾರೀ ವಿರೋಧವೂ ವ್ಯಕ್ತವಾಗಿದೆ. ಉತ್ತರ ಕೇರಳದ ತಲಶ್ಶೇರಿಯಲ್ಲಿ ಆಯೋಜಿಸಲಾಗಿದ್ದ ಕ್ಯಾಥೋಲಿಕ್ ರೈತರ ಸಮಾವೇಶದಲ್ಲಿ ಮಾತನಾಡಿದ ಬಿಷಪ್, ದೇಶವನ್ನು ಆಳುತ್ತಿರುವ ಪಕ್ಷವನ್ನು ಚರ್ಚ್‌ಗಳಿಂದ ದೂರ ಇಡುವ ಅಗತ್ಯವಿಲ್ಲ ಎಂದಿದ್ದಾರೆ. ಕೇರಳದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ನೈಸರ್ಗಿಕ ರಬ್ಬರ್‌ಗೆ ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ 130ರಿಂದ 150 ರೂ. ಇದೆ. ಕೇಂದ್ರ ಸರ್ಕಾರವು ಈ ಬೆಲೆಯನ್ನು ಕೆಜಿಗೆ 300 ರೂ.ಗೆ ಏರಿಕೆ ಮಾಡಬೇಕು ಎಂಬುದು ಬಿಷಪ್ ಅವರ ಬೇಡಿಕೆಯಾಗಿದೆ. ಒಂದು ವೇಳೆ, ಈ ಬೇಡಿಕೆಯನ್ನು ಕೇಂದ್ರ ಸರ್ಕಾರವು ಈಡೇರಿಸಿದರೆ, ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ಸಹಜವಾಗಿಯೇ ಚರ್ಚ್ ನೆರವು ನೀಡಲಿದೆ ಎಂದು ಬಿಷಪ್ ಹೇಳಿದ್ದಾರೆ.

ಬಿಜೆಪಿಯ ಕಡೆಗೆ ಚರ್ಚ್ ಎಂದಿಗೂ ಅಸ್ಪೃಶ್ಯತೆಯನ್ನು ಹೊಂದಿಲ್ಲ. ಯಾಕೆಂದರೆ, ಅದು ದೇಶವನ್ನು ಆಳುತ್ತಿರುವ ಪಕ್ಷವಾಗಿದೆ. ಒಂದು ವೇಳೆ, ರೈತರ ಸಮಸ್ಯೆಯನ್ನು ಬಗೆಹರಿಸಿದರೆ, ನಾವು ಬಿಜೆಪಿಗೆ ವೋಟ್ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಷಪ್ ಅವರ ಈ ಹೇಳಿಕೆಗೆ ಸಿಪಿಎಂ ಮತ್ತು ಕಾಂಗ್ರೆಸ್ ಟೀಕಿಸಿವೆ. ಇದೇ ವೇಳೆ, ಬಿಜೆಪಿಯು ಈ ಹೇಳಿಕೆಯನ್ನು ಸ್ವಾಗತಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago