Advertisement
ಸುದ್ದಿಗಳು

ರಬ್ಬರ್ ಗೆ 300 ರೂ ಮಾಡಿದ್ರೆ ಬಿಜೆಪಿಗೆ ಬೆಂಬಲ | ಸಂಚಲನ ಸೃಷ್ಟಿಸಿದ ಬಿಷಪ್‌ ಹೇಳಿಕೆ | ಪಿಎಂ, ಕಾಂಗ್ರೆಸ್ ತೀವ್ರ ಟೀಕೆ

Share

ಒಂದು ವೇಳೆ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್ ಬೆಲೆಯನ್ನು ಕೆ.ಜಿ.ಗೆ 300 ರೂ. ಮಾಡಿದರೆ, ಚರ್ಚ್‌ನಲ್ಲಿ ನಂಬಿಕೆ ಇಟ್ಟವರು ಈ ಬಾರಿ ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ನೆರವು ನೀಡಲಿದ್ದಾರೆ ಎಂದು ತಲಶ್ಶೇರಿಯಲ್ಲಿ ಮಾರ್ ಜೋಸೆಫ್ ಪಂಪ್ಲಾನಿ ಹೇಳಿದ್ದಾರೆ.

ಕೇರಳದ ರೋಮನ್ ಕ್ಯಾಥೋಲಿಕ್ ಬಿಷಪ್ ಒಬ್ಬರು ಭಾರತೀಯ ಜನತಾ ಪಕ್ಷದ ಪರವಾಗಿ ಮಾತನಾಡಿದ್ದು, ಅವರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಅವರ ಈ ಹೇಳಿಕೆಗೆ ಭಾರೀ ವಿರೋಧವೂ ವ್ಯಕ್ತವಾಗಿದೆ. ಉತ್ತರ ಕೇರಳದ ತಲಶ್ಶೇರಿಯಲ್ಲಿ ಆಯೋಜಿಸಲಾಗಿದ್ದ ಕ್ಯಾಥೋಲಿಕ್ ರೈತರ ಸಮಾವೇಶದಲ್ಲಿ ಮಾತನಾಡಿದ ಬಿಷಪ್, ದೇಶವನ್ನು ಆಳುತ್ತಿರುವ ಪಕ್ಷವನ್ನು ಚರ್ಚ್‌ಗಳಿಂದ ದೂರ ಇಡುವ ಅಗತ್ಯವಿಲ್ಲ ಎಂದಿದ್ದಾರೆ. ಕೇರಳದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ನೈಸರ್ಗಿಕ ರಬ್ಬರ್‌ಗೆ ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ 130ರಿಂದ 150 ರೂ. ಇದೆ. ಕೇಂದ್ರ ಸರ್ಕಾರವು ಈ ಬೆಲೆಯನ್ನು ಕೆಜಿಗೆ 300 ರೂ.ಗೆ ಏರಿಕೆ ಮಾಡಬೇಕು ಎಂಬುದು ಬಿಷಪ್ ಅವರ ಬೇಡಿಕೆಯಾಗಿದೆ. ಒಂದು ವೇಳೆ, ಈ ಬೇಡಿಕೆಯನ್ನು ಕೇಂದ್ರ ಸರ್ಕಾರವು ಈಡೇರಿಸಿದರೆ, ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ಸಹಜವಾಗಿಯೇ ಚರ್ಚ್ ನೆರವು ನೀಡಲಿದೆ ಎಂದು ಬಿಷಪ್ ಹೇಳಿದ್ದಾರೆ.

ಬಿಜೆಪಿಯ ಕಡೆಗೆ ಚರ್ಚ್ ಎಂದಿಗೂ ಅಸ್ಪೃಶ್ಯತೆಯನ್ನು ಹೊಂದಿಲ್ಲ. ಯಾಕೆಂದರೆ, ಅದು ದೇಶವನ್ನು ಆಳುತ್ತಿರುವ ಪಕ್ಷವಾಗಿದೆ. ಒಂದು ವೇಳೆ, ರೈತರ ಸಮಸ್ಯೆಯನ್ನು ಬಗೆಹರಿಸಿದರೆ, ನಾವು ಬಿಜೆಪಿಗೆ ವೋಟ್ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಷಪ್ ಅವರ ಈ ಹೇಳಿಕೆಗೆ ಸಿಪಿಎಂ ಮತ್ತು ಕಾಂಗ್ರೆಸ್ ಟೀಕಿಸಿವೆ. ಇದೇ ವೇಳೆ, ಬಿಜೆಪಿಯು ಈ ಹೇಳಿಕೆಯನ್ನು ಸ್ವಾಗತಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

3 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago