ಒಂದು ವೇಳೆ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್ ಬೆಲೆಯನ್ನು ಕೆ.ಜಿ.ಗೆ 300 ರೂ. ಮಾಡಿದರೆ, ಚರ್ಚ್ನಲ್ಲಿ ನಂಬಿಕೆ ಇಟ್ಟವರು ಈ ಬಾರಿ ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ನೆರವು ನೀಡಲಿದ್ದಾರೆ ಎಂದು ತಲಶ್ಶೇರಿಯಲ್ಲಿ ಮಾರ್ ಜೋಸೆಫ್ ಪಂಪ್ಲಾನಿ ಹೇಳಿದ್ದಾರೆ.
ಕೇರಳದ ರೋಮನ್ ಕ್ಯಾಥೋಲಿಕ್ ಬಿಷಪ್ ಒಬ್ಬರು ಭಾರತೀಯ ಜನತಾ ಪಕ್ಷದ ಪರವಾಗಿ ಮಾತನಾಡಿದ್ದು, ಅವರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಅವರ ಈ ಹೇಳಿಕೆಗೆ ಭಾರೀ ವಿರೋಧವೂ ವ್ಯಕ್ತವಾಗಿದೆ. ಉತ್ತರ ಕೇರಳದ ತಲಶ್ಶೇರಿಯಲ್ಲಿ ಆಯೋಜಿಸಲಾಗಿದ್ದ ಕ್ಯಾಥೋಲಿಕ್ ರೈತರ ಸಮಾವೇಶದಲ್ಲಿ ಮಾತನಾಡಿದ ಬಿಷಪ್, ದೇಶವನ್ನು ಆಳುತ್ತಿರುವ ಪಕ್ಷವನ್ನು ಚರ್ಚ್ಗಳಿಂದ ದೂರ ಇಡುವ ಅಗತ್ಯವಿಲ್ಲ ಎಂದಿದ್ದಾರೆ. ಕೇರಳದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ನೈಸರ್ಗಿಕ ರಬ್ಬರ್ಗೆ ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ 130ರಿಂದ 150 ರೂ. ಇದೆ. ಕೇಂದ್ರ ಸರ್ಕಾರವು ಈ ಬೆಲೆಯನ್ನು ಕೆಜಿಗೆ 300 ರೂ.ಗೆ ಏರಿಕೆ ಮಾಡಬೇಕು ಎಂಬುದು ಬಿಷಪ್ ಅವರ ಬೇಡಿಕೆಯಾಗಿದೆ. ಒಂದು ವೇಳೆ, ಈ ಬೇಡಿಕೆಯನ್ನು ಕೇಂದ್ರ ಸರ್ಕಾರವು ಈಡೇರಿಸಿದರೆ, ಕೇರಳದಿಂದ ಬಿಜೆಪಿಯ ಮೊದಲ ಸಂಸದರನ್ನು ಆಯ್ಕೆ ಮಾಡಲು ಸಹಜವಾಗಿಯೇ ಚರ್ಚ್ ನೆರವು ನೀಡಲಿದೆ ಎಂದು ಬಿಷಪ್ ಹೇಳಿದ್ದಾರೆ.
ಬಿಜೆಪಿಯ ಕಡೆಗೆ ಚರ್ಚ್ ಎಂದಿಗೂ ಅಸ್ಪೃಶ್ಯತೆಯನ್ನು ಹೊಂದಿಲ್ಲ. ಯಾಕೆಂದರೆ, ಅದು ದೇಶವನ್ನು ಆಳುತ್ತಿರುವ ಪಕ್ಷವಾಗಿದೆ. ಒಂದು ವೇಳೆ, ರೈತರ ಸಮಸ್ಯೆಯನ್ನು ಬಗೆಹರಿಸಿದರೆ, ನಾವು ಬಿಜೆಪಿಗೆ ವೋಟ್ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಷಪ್ ಅವರ ಈ ಹೇಳಿಕೆಗೆ ಸಿಪಿಎಂ ಮತ್ತು ಕಾಂಗ್ರೆಸ್ ಟೀಕಿಸಿವೆ. ಇದೇ ವೇಳೆ, ಬಿಜೆಪಿಯು ಈ ಹೇಳಿಕೆಯನ್ನು ಸ್ವಾಗತಿಸಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…