Advertisement
MIRROR FOCUS

ಕೇರಳದಲ್ಲಿ ಭರ್ಜರಿ ಮಳೆ | ಎರ್ನಾಕುಲಂನಲ್ಲಿ ನಿರಂತರ ಮಳೆ | ಜಲಾವೃತಗೊಂಡ ಕೆಲವು ಪ್ರದೇಶ | 24 ಗಂಟೆಗಳಲ್ಲಿ 200 ಮಿಮೀ ಮಳೆ..! |

Share

ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ ದಾಖಲಾಗಿದೆ, ಪರಿಹಾರ ಮತ್ತು ಪುನರ್ವಸತಿಗಾಗಿ ಸಚಿವರು ಕರೆ ನೀಡಿದ್ದಾರೆ. ಕೇರಳದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾರೀ ಮಳೆಯ ಕಾರಣದಿಂದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಜಲಾವೃತಕ್ಕೆ ಕಾರಣವಾಯಿತು. ಕೇರಳ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಕೇರಳದ ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ.

ಮಳೆಯ ಕಾರಣದಿಂದ ಕೋಝಿಕ್ಕೋಡ್‌ ಜಿಲ್ಲೆಯ ಮುಕ್ಕಂನಲ್ಲಿ ಗಣಿಗಾರಿಕೆ ಪ್ರದೇಶದ ಬಳಿಯ ಮಹಿಳೆಯೊಬ್ಬರ ಮನೆಯ ಪರಿಸ್ಥಿತಿ – (ಮನೋರಮಾ ಚಿತ್ರ)

ಮಳೆಯ ಕಾರಣದಿಂದ ವಿವಿಧ ಕಡೆ ನೀರಿನಲ್ಲಿ ಮುಳುಗಿದ ಘಟನೆಗಳಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇಬ್ಬರು ನೀರು ತುಂಬಿದ ಕ್ವಾರಿಗಳಿಗೆ ಬಿದ್ದು, ಇಬ್ಬರು ಸಿಡಿಲು ಬಡಿದು ಮತ್ತು ಒಬ್ಬರು ಗೋಡೆ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕೋಝಿಕ್ಕೋಡ್ ಜಿಲ್ಲೆಯ ಕುನ್ನಮಂಗಲಂನಲ್ಲಿ ಕಳೆದ 24 ಗಂಟೆಗಳಲ್ಲಿ 226 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಅಲಪ್ಪುಳ ಜಿಲ್ಲೆಯ ಚೆರ್ತಾಲದಲ್ಲಿ 215 ಮಿಮೀ, ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ಮತ್ತು ಕೋಝಿಕೋಡ್ ಜಿಲ್ಲೆಯ ಥಾಮರಸ್ಸೆರಿಯಲ್ಲಿ ಕ್ರಮವಾಗಿ 203 ಮಿಮೀ  ಮಳೆಯಾಗಿದೆ.

ಈ ನಡುವೆ ನೈರುತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಐಎಂಡಿ ಬುಧವಾರವೇ ತಿಳಿಸಿದೆ. ಆದರೆ ಚಂಡಮಾರುತದ ಕಾರಣದಿಂದ 4-5 ದಿನ ವಿಳಂಬವಾಗುವ ಸಾಧ್ಯತೆಯ ಬಗ್ಗೆಯೂ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

10 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago