ಜೂನ್ 1 ರಂದು ಆರಂಭವಾಗಲಿರುವ ನೈಋತ್ಯ ಮಾನ್ಸೂನ್ ತನ್ನ ನಿಗದಿತ ದಿನಾಂಕಕ್ಕಿಂತ ಎಂಟು ದಿನ ಮುಂಚಿತವಾಗಿ ಕೇರಳಕ್ಕೆ ಆಗಮಿಸಿದ್ದು, ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಮಾಡಿದೆ. 2009 ರ ನಂತರ ಕೇರಳದಲ್ಲಿ ಮುಂಗಾರು ನಿಗದಿತ ದಿನಾಂಕಕ್ಕಿಂತ ಮೊದಲು ಆರಂಭವಾಗುತ್ತಿರುವುದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…..ಮುಂದೆ ಓದಿ….
ನೈಋತ್ಯ ಮಾನ್ಸೂನ್ ಕೇರಳಕ್ಕೆ ಮೇ 24, 2025 ರಂದು ಆಗಮಿಸುತ್ತದೆ, ಇದು ಸಾಮಾನ್ಯಕ್ಕಿಂತ 8 ದಿನಗಳು ಮುಂಚಿತವಾಗಿ ಆಗಮಿಸಿದೆ. 2009 ರಲ್ಲಿ ಹಾಗೂ 1975 ರಲ್ಲಿ ಮುಂಗಾರು ನಿಗದಿತ ದಿನಾಂಕಕ್ಕಿಂತ ಮೊದಲೇ ಆರಂಭವಾಗಿತ್ತು. ನೈಋತ್ಯ ಮಾನ್ಸೂನ್ ಜೂನ್ 1 ರ ವೇಳೆಗೆ ಕೇರಳದಲ್ಲಿ ಆರಂಭವಾಗುತ್ತದೆ ಮತ್ತು ಜುಲೈ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಸೆಪ್ಟೆಂಬರ್ 17 ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮುಖವಾಗಿ ಚಲಿಸಲು ಪ್ರಾರಂಭವಾಗಿ ಅಕ್ಟೋಬರ್ 15 ರ ಹೊತ್ತಿಗೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಕಳೆದ ವರ್ಷ ಮೇ 30 ರಂದು, 2023 ರಲ್ಲಿ ಜೂನ್ 8, 2022 ರಲ್ಲಿ ಮೇ 29, 2021 ರಲ್ಲಿ ಜೂನ್ 3, 2020 ರಲ್ಲಿ ಜೂನ್ 1, 2019 ರಲ್ಲಿ ಜೂನ್ 8, ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯದಲ್ಲಿ ಮಾನ್ಸೂನ್ ಪ್ರವೇಶಿಸಿತ್ತು.
ಹವಾಮಾನ ತಜ್ಞರ ಪ್ರಕಾರ, ಮಳೆಗಾಲದ ಆರಂಭದ ದಿನಾಂಕ ಮತ್ತು ಈ ವರ್ಷ ದೇಶಾದ್ಯಂತ ಬಿದ್ದ ಒಟ್ಟು ಮಳೆಯ ನಡುವೆ ಯಾವುದೇ ನೇರ ಸಂಬಂಧವಿಲ್ಲ.ಕೇರಳಕ್ಕೆ ಮುಂಗಾರು ಬೇಗ ಅಥವಾ ತಡವಾಗಿ ಆಗಮಿಸುತ್ತದೆ ಎಂದರೆ ಅದು ದೇಶದ ಇತರ ಭಾಗಗಳನ್ನು ಬೇಗನೆ ಆವರಿಸುತ್ತದೆ ಎಂದರ್ಥವಲ್ಲ. ಇದಕ್ಕೆ ದೊಡ್ಡ ಪ್ರಮಾಣದ ವ್ಯತ್ಯಾಸಗಳು ಮತ್ತು ಜಾಗತಿಕ, ಪ್ರಾದೇಶಿಕ ಮತ್ತು ಸ್ಥಳೀಯವಾದ ಕಾರಣಗಳೂ ಇರುತ್ತದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.…..ಮುಂದೆ ಓದಿ….
ಈ ಬಾರಿ ಬೇಗನೆ ಆರಂಭವಾದ ಮುಂಗಾರು ಅಬ್ಬರಿಸಲು ಆರಂಭಿಸಿದೆ. ಈಗ ಕೇರಳ, ಮಾಹೆ, ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾದಲ್ಲಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮಧ್ಯ, ಪೂರ್ವ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದೆಹಲಿ, ಹರಿಯಾಣ, ಪಂಜಾಬ್, ಪೂರ್ವ ಉತ್ತರ ಪ್ರದೇಶ, ಆಂಧ್ರಪ್ರದೇಶ, ಛತ್ತೀಸ್ಗಢ ಮತ್ತು ಗುಜರಾತ್ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಪಂಜಾಬ್ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ತೀವ್ರತರವಾದ ಶಾಖದ ಅಲೆಯಿಂದ ಹಿಡಿದು ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಭಾರೀ ಮಳೆಯ ಕಾರಣದಿಂದ ಇಂದಿನಿಂದ ಒಂದು ವಾರ ಹಲವು ಜಿಲ್ಲೆಗಳಿಗೆ ರೆಡ್ ಎಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಮಾನ್ಸೂನ್ ಮಾರುತಗಳು ವೇಗ ಪಡೆಯಲಿದೆ. ಹೀಗಾಗಿ ಮಳೆಯ ಅಬ್ಬರವೂ ಹೆಚ್ಚಾಗಲಿದೆ. ಮೇ 27 ಅಥವಾ ಮೇ 28ರ ವೇಳೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದಲೇ ಪೂರ್ವ ಮುಂಗಾರಿನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಈಗಾಗಲೇ ಒಂದು ವಾರಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ 3 ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುದಂತೆ ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ ಬೆಂಗಳೂರಿಗೆ ಎಲ್ಲೋ ಎಲರ್ಟ್ ನೀಡಲಾಗಿದೆ. ಬೆಂಗಳೂರಿನ ಕೆಲವೆಡೆ ಇಂದು ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಎಲರ್ಟ್ ಘೋಷಣೆ ಮಾಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಎಲರ್ಟ್ ಇದ್ದರೆ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಎಲ್ಲೋ ಎಲರ್ಟ್ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.
The Southwest Monsoon has officially arrived in Kerala on May 24, 2025, marking its onset 8 days earlier than the normal date of June 1.This early onset is the earliest since May 23, 2009, when the monsoon arrived one day earlier than this year’s arrival date. The earliest recorded onset since 1975 was on May 19, 1990, which was 13 days ahead of the normal schedule.With the monsoon setting in early, attention now turns to its progression across other parts of the country.