ಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆ

May 24, 2023
7:54 PM

ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್‌) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.

Advertisement

ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್‌ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group