ಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆ

May 24, 2023
7:54 PM

ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್‌) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.

ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್‌ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror