MIRROR FOCUS

ಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್‌) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.

Advertisement

ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್‌ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

2 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

5 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

6 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

23 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

1 day ago