ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…