ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…