Advertisement
MIRROR FOCUS

ಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆ

Share

ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್‌) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.

ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್‌ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

11 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

14 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

20 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago