ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…