ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…