ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…