ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…