Advertisement
MIRROR FOCUS

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

Share

ಕೇರಳ ಸರ್ಕಾರ ತನ್ನ ಪರಿಷ್ಕೃತ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಮಹತ್ವದ ಘೋಷಣೆ ಮಾಡಿದ್ದು, ರಬ್ಬರ್‌ಗೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು (Support Price) ಪ್ರತಿ ಕೆ.ಜಿ.ಗೆ ₹200ರಿಂದ ₹250ಕ್ಕೆ ಏರಿಸಿದೆ. ಕೇರಳ ರಾಜ್ಯದ ಸುಮಾರು 5 ಲಕ್ಷಕ್ಕೂ ಅಧಿಕ ರಬ್ಬರ್‌ ಬೆಳೆಗಾರರಿಗೆ ಈ ಕ್ರಮದಿಂದ ನೇರ ಪ್ರಯೋಜನವಾಗಲಿದೆ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ರಬ್ಬರ್‌ ಬೆಲೆ ದಾಖಲೆ ಮಟ್ಟ ತಲುಪಿದ್ದು, ಆರ್‌ಎಸ್‌ಎಸ್-4 (RSS-4) ದರ್ಜೆಯ ರಬ್ಬರ್‌ ಬೆಲೆ ಕೆಲ ಮಾರುಕಟ್ಟೆಗಳಲ್ಲಿ ₹260-₹280ರ ಗಡಿಯನ್ನು ದಾಟಿದೆ. ಹಾಗಿದ್ದರೂ ಮಾರುಕಟ್ಟೆ ಬೆಲೆಯಲ್ಲಿ ಏರಿಳಿತ ಸಂಭವಿಸಿದರೂ ರೈತರಿಗೆ ಕನಿಷ್ಠ ಆದಾಯದ ಭದ್ರತೆ ಒದಗಿಸಲು ಕೇರಳ ಸರ್ಕಾರ ಬೆಂಬಲ ಬೆಲೆಯನ್ನು ₹250ಕ್ಕೆ ಹೆಚ್ಚಿಸಿದೆ.

ಕೇರಳದ ಈಗಿನ ಯುಡಿಎಫ್‌ ಸರ್ಕಾರದ ಮೊದಲ ಬಜೆಟ್‌ನಲ್ಲಿ ಕೃಷಿ ಮತ್ತು ಸಾಂಪ್ರದಾಯಿಕ ಉದ್ಯಮಗಳಿಗೆ ವಿಶೇಷ ಒತ್ತು ನೀಡಲಾಗಿದ್ದು, ರಬ್ಬರ್‌ ಕ್ಷೇತ್ರಕ್ಕೆ ಹೆಚ್ಚುವರಿ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರಬ್ಬರ್‌ ಬೆಲೆ ಏರಿಕೆಯಿಂದ ಇತ್ತೀಚಿನ ತಿಂಗಳುಗಳಲ್ಲಿ ರಬ್ಬರ್ ವಲಯದಲ್ಲಿ ಉತ್ಸಾಹ ಮೂಡಿದ್ದು, ಹಲವು ಕಡೆ ನಿರ್ಲಕ್ಷ್ಯಗೊಂಡಿದ್ದ ತೋಟಗಳಲ್ಲಿ ಮತ್ತೆ ಟ್ಯಾಪಿಂಗ್‌ ಚಟುವಟಿಕೆಗಳು ಆರಂಭವಾಗಿವೆ ಎಂದು ವರದಿಗಳು ತಿಳಿಸಿವೆ.

Kerala has increased the support price of natural rubber from ₹200 to ₹250 per kg in its revised budget. The move is expected to benefit over five lakh rubber farmers in the state and provide income security despite market fluctuations. The decision comes at a time when rubber prices have touched historic highs in India.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

9 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

10 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

14 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

15 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

18 hours ago

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ

ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್‌ ಸ್ಟ್ರೆಸ್‌ ಹೆಚ್ಚುವ ಸಾಧ್ಯತೆ ಇದೆ ಎಂದು…

22 hours ago