ಕೇರಳದ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಇನ್ನುಮುಂದೆ ಮಕ್ಕಳು ಗುರುವನ್ನು ಸರ್ ಅಥವಾ ಮೇಡಂ ಎಂಬ ಹೆಸರಿನಿಂದ ಕರೆಯುವಂತಿಲ್ಲ. ಕೇರಳ ಅನೇಕ ಶಾಲೆಗಳು ಲಿಂಗ-ತಟಸ್ಥ ಸಮವಸ್ತ್ರವನ್ನು ಬೆಂಬಲಿಸಿದ ನಂತರ ಈ ಕ್ರಮವು ಬಂದಿದೆ. ಇನ್ನುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯಲಾಗುತ್ತದೆ.
ಹಲವಾರು ಮಹಿಳಾ ಹಕ್ಕುಗಳು ಗುಂಪುಗಳು ಯುನಿಸೆಕ್ಸ್ ಯೂನಿಫಾರ್ಮ್ ಉಪಕ್ರಮವನ್ನು ಬೆಂಬಲಿಸಲು ಬಂದಿವೆ. ಈ ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮಾತೂರು ಪಂಚಾಯಿತಿಯು ಕಳೆದ ವರ್ಷ ಜುಲೈನಲ್ಲಿ ಸರ್ ಮತ್ತು ಮೇಡಂ ಎಂದು ಕರೆಯುವ ಪದ್ಧತಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿತ್ತು. ಪಂಚಾಯಿತಿ ಸಿಬ್ಬಂದಿಯನ್ನು ಅವರ ಪದನಾಮದಿಂದ ಸಂಬೋಧಿಸುವಂತೆ ಆಡಳಿತ ಮಂಡಳಿ ಸಾರ್ವಜನಿಕ ಸೂಚಿಸಿತ್ತು. ಇದು ಲಿಂಗ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಅವರು ಹೇಳಿದರು.
ಈ ಕ್ರಮವನ್ನು ಮಕ್ಕಳ ಪೋಷಕರೂ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ ಅನುಸರಿಸಲಾಗುವ ಈ ಪದ್ಧತಿಯು ಲಿಂಗಾನುಸಾರ ಸಂಬೋಧನೆಗೆ ಸಂಬಂಧಿಸಿದಂತೆ ತಟಸ್ತ ಧೋರಣೆಯ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…