Advertisement
MIRROR FOCUS

ಪವಿತ್ರ ತುಳಸಿಯೂ ದೇವಸ್ಥಾನಕ್ಕೆ ಕಂಟಕವಾಯ್ತು | ಅತಿಯಾದ ವಿಷ ಸಿಂಪಡಣೆಯ ಪರಿಣಾಮ |

Share

ಕೇರಳದ ತ್ರಿಶೂರ್‌ನಲ್ಲಿರುವ ಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯದಲ್ಲಿ ತುಳಸಿ  ಸಮರ್ಪಣೆಗೆ ನಿರ್ಬಂಧ ವಿಧಿಸಲಾಗಿದೆ. ಹಾಗೆಂದು ದೇವಸ್ಥಾನದಲ್ಲಿ ದೇವರಿಗೆ ತುಳಸಿ ಅರ್ಪಣೆಯನ್ನೇ ಸ್ಥಗಿತಗೊಳಿಸಿಲ್ಲ. ವಿಷ ಸಿಂಪಡಣೆ ಮಾಡಿರುವ ತುಳಸಿ ಅರ್ಪಣೆಗಷ್ಟೇ ನಿರ್ಬಂಧ ಇದೆ.

ದೇವಸ್ಥಾನದಲ್ಲಿ ಕೀಟನಾಶಕ ಸಿಂಪಡಣೆಯ ತುಳಸಿಯನ್ನು  ಬಳಸುವುದನ್ನು ಮಾತ್ರಾ ನಿರ್ಬಂಧಿಸಿದೆ. ದೇವಾಲಯದ ಸಿಬ್ಬಂದಿಗಳು ಇಂತಹ ‘ತುಳಸಿ’ಯನ್ನು ಪದೇ ಪದೇ ದೇವರಿಗೆ ಅರ್ಪಣೆ ಮಾಡುವುದರಿಂದ ಅವರಿಗೆ  ಅಲರ್ಜಿ ಮತ್ತು ತುರಿಕೆಯಂತಹ ಸಮಸ್ಯೆಗಳು ಆಗಾಗ ಕಂಡುಬರುತ್ತಿದ್ದ ಬಗ್ಗೆ  ದೂರುಗಳು ಬರುತ್ತಿದ್ದವು.

ಬಹುತೇಕ ಯಾತ್ರಾರ್ಥಿಗಳು ಅಂಗಡಿಗಳಿಂದ ‘ತುಳಸಿ’ಯನ್ನು ದೇವರಿಗೆ ಅರ್ಪಣೆ ಮಾಡುತ್ತಿದ್ದರು.  ಹೆಚ್ಚಿನ ಪ್ರಮಾಣದ ಕೀಟನಾಶಕವನ್ನು ಬಳಸಿಕೊಂಡು ವಾಣಿಜ್ಯ ಉದ್ದೇಶಗಳಿಗಾಗಿ  ತುಳಿಸಿಯನ್ನು ಬೆಳೆಸಲಾಗುತ್ತದೆ, ಇದರಿಂದಾಗಿ ಅವುಗಳನ್ನು ದಿನಗಳವರೆಗೆ ಸಂರಕ್ಷಿಸಲಾಗುತ್ತದೆ. ಕೀಟನಾಶಕ ಮಿಶ್ರಿತ ‘ತುಳಸಿ’ಗೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ಅಲರ್ಜಿ ಮತ್ತು ತುರಿಕೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ  ‘ತುಳಸಿ’ ಮೇಲೆ ನಿರ್ಬಂಧ ಹೇರಲಾಗಿದೆ” ಎಂದು ದೇವಸ್ಥಾನದ ಆಡಳಿತವು ತಿಳಿಸಿದೆ.

ಆದರೆ, ದೇವಸ್ಥಾನದಲ್ಲಿ ತುಳಸಿ ಬಳಕೆಯೇ ನಿಷೇಧವಾಗಿಲ್ಲ. ತುಳಸಿ ಪ್ರಿಯ ಕೃಷ್ಣನಿಗಾಗಿ  ಪ್ರತ್ಯೇಕವಾಗಿ ಕೀಟನಾಶಕ ರಹಿತವಾದ ತುಳಿಸಿಯನ್ನು ಬೆಳೆದು ಅರ್ಪಣೆ ಮಾಡಲಾಗುತ್ತಿದೆ.  ಆದರೆ, ದೇವಾಲಯದಲ್ಲಿ ತುಳಸಿಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ದೇವಾಲಯದ ನಿರ್ಧಾರದ ಹಿಂದೆ ಕೇರಳದ ಸಿಪಿಐ ಸರಕಾರವನ್ನು ದೂಷಿಸಲಾಗುತ್ತಿದೆ. ಆದರೆ ಇದಕ್ಕೂ ರಾಜಕೀಯ ಪಕ್ಷಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಗುರುವಾಯೂರು ದೇವಸ್ಥಾನದ ಅಧ್ಯಕ್ಷ ವಿ.ಕೆ.ವಿಜಯನ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

6 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

13 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

14 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

21 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 day ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago