Advertisement
MIRROR FOCUS

ಪವಿತ್ರ ತುಳಸಿಯೂ ದೇವಸ್ಥಾನಕ್ಕೆ ಕಂಟಕವಾಯ್ತು | ಅತಿಯಾದ ವಿಷ ಸಿಂಪಡಣೆಯ ಪರಿಣಾಮ |

Share

ಕೇರಳದ ತ್ರಿಶೂರ್‌ನಲ್ಲಿರುವ ಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯದಲ್ಲಿ ತುಳಸಿ  ಸಮರ್ಪಣೆಗೆ ನಿರ್ಬಂಧ ವಿಧಿಸಲಾಗಿದೆ. ಹಾಗೆಂದು ದೇವಸ್ಥಾನದಲ್ಲಿ ದೇವರಿಗೆ ತುಳಸಿ ಅರ್ಪಣೆಯನ್ನೇ ಸ್ಥಗಿತಗೊಳಿಸಿಲ್ಲ. ವಿಷ ಸಿಂಪಡಣೆ ಮಾಡಿರುವ ತುಳಸಿ ಅರ್ಪಣೆಗಷ್ಟೇ ನಿರ್ಬಂಧ ಇದೆ.

ದೇವಸ್ಥಾನದಲ್ಲಿ ಕೀಟನಾಶಕ ಸಿಂಪಡಣೆಯ ತುಳಸಿಯನ್ನು  ಬಳಸುವುದನ್ನು ಮಾತ್ರಾ ನಿರ್ಬಂಧಿಸಿದೆ. ದೇವಾಲಯದ ಸಿಬ್ಬಂದಿಗಳು ಇಂತಹ ‘ತುಳಸಿ’ಯನ್ನು ಪದೇ ಪದೇ ದೇವರಿಗೆ ಅರ್ಪಣೆ ಮಾಡುವುದರಿಂದ ಅವರಿಗೆ  ಅಲರ್ಜಿ ಮತ್ತು ತುರಿಕೆಯಂತಹ ಸಮಸ್ಯೆಗಳು ಆಗಾಗ ಕಂಡುಬರುತ್ತಿದ್ದ ಬಗ್ಗೆ  ದೂರುಗಳು ಬರುತ್ತಿದ್ದವು.

ಬಹುತೇಕ ಯಾತ್ರಾರ್ಥಿಗಳು ಅಂಗಡಿಗಳಿಂದ ‘ತುಳಸಿ’ಯನ್ನು ದೇವರಿಗೆ ಅರ್ಪಣೆ ಮಾಡುತ್ತಿದ್ದರು.  ಹೆಚ್ಚಿನ ಪ್ರಮಾಣದ ಕೀಟನಾಶಕವನ್ನು ಬಳಸಿಕೊಂಡು ವಾಣಿಜ್ಯ ಉದ್ದೇಶಗಳಿಗಾಗಿ  ತುಳಿಸಿಯನ್ನು ಬೆಳೆಸಲಾಗುತ್ತದೆ, ಇದರಿಂದಾಗಿ ಅವುಗಳನ್ನು ದಿನಗಳವರೆಗೆ ಸಂರಕ್ಷಿಸಲಾಗುತ್ತದೆ. ಕೀಟನಾಶಕ ಮಿಶ್ರಿತ ‘ತುಳಸಿ’ಗೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ಅಲರ್ಜಿ ಮತ್ತು ತುರಿಕೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ  ‘ತುಳಸಿ’ ಮೇಲೆ ನಿರ್ಬಂಧ ಹೇರಲಾಗಿದೆ” ಎಂದು ದೇವಸ್ಥಾನದ ಆಡಳಿತವು ತಿಳಿಸಿದೆ.

ಆದರೆ, ದೇವಸ್ಥಾನದಲ್ಲಿ ತುಳಸಿ ಬಳಕೆಯೇ ನಿಷೇಧವಾಗಿಲ್ಲ. ತುಳಸಿ ಪ್ರಿಯ ಕೃಷ್ಣನಿಗಾಗಿ  ಪ್ರತ್ಯೇಕವಾಗಿ ಕೀಟನಾಶಕ ರಹಿತವಾದ ತುಳಿಸಿಯನ್ನು ಬೆಳೆದು ಅರ್ಪಣೆ ಮಾಡಲಾಗುತ್ತಿದೆ.  ಆದರೆ, ದೇವಾಲಯದಲ್ಲಿ ತುಳಸಿಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ದೇವಾಲಯದ ನಿರ್ಧಾರದ ಹಿಂದೆ ಕೇರಳದ ಸಿಪಿಐ ಸರಕಾರವನ್ನು ದೂಷಿಸಲಾಗುತ್ತಿದೆ. ಆದರೆ ಇದಕ್ಕೂ ರಾಜಕೀಯ ಪಕ್ಷಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಗುರುವಾಯೂರು ದೇವಸ್ಥಾನದ ಅಧ್ಯಕ್ಷ ವಿ.ಕೆ.ವಿಜಯನ್ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

3 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

4 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

5 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

11 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

17 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago