ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |

May 17, 2025
8:27 PM
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಕರ್ನಾಟಕ ಕರಾವಳಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದ್ದು, ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಈಗಾಗಲೇ ಎಲ್ಲೋ ಎಲರ್ಟ್‌ ಘೋಷಿಸಲಾಗಿದೆ. ನಾಳೆ ಪಾಲಕ್ಕಾಡ್ ನಿಂದ ಕಾಸರಗೋಡುವರೆಗಿನ ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ ನೀಡಲಾಗಿದೆ. ನಾಳೆಯಿಂದ ಈ ತಿಂಗಳ 20 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.…..ಮುಂದೆ ಓದಿ….

Advertisement

ದಕ್ಷಿಣ ಅರೇಬಿಯನ್ ಸಮುದ್ರ ಮತ್ತು ಕನ್ಯಾಕುಮಾರಿ ಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ಆವರಿಸಿದೆ. ನಾಳೆಯಿಂದ ಕೇರಳದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 20 ರಂದು ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಎಲರ್ಟ್‌ ನೀಡಿದೆ. ಮುನ್ಸೂಚನೆಯ ಪ್ರಕಾರ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅತಿ ಹೆಚ್ಚು ಮಳೆ ಎಂದರೆ 24 ಗಂಟೆಗಳಲ್ಲಿ 115 ಮಿ.ಮೀ ನಿಂದ 204 ಮಿ.ಮೀ ಮಳೆ ಬೀಳಬಹುದು.  ನಾಳೆ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

19 ರಂದು ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ, 20 ರಂದು ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಮತ್ತು 21 ರಂದು ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಎಲ್ಲೋ ಎಲರ್ಟ್‌  ಘೋಷಿಸಿದೆ. ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಮೇ 21 ರ ವೇಳೆಗೆ ಮಧ್ಯ-ಪೂರ್ವ ಅರೇಬಿಯನ್ ಸಮುದ್ರದಲ್ಲಿ ಕರ್ನಾಟಕ ಕರಾವಳಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಚಂಡಮಾರುತದ ಚಲನೆ ರೂಪುಗೊಳ್ಳುವ ಸಾಧ್ಯತೆಯಿದೆ ಮತ್ತು ಮೇ 22 ರ ವೇಳೆಗೆ ಕಡಿಮೆ ಒತ್ತಡದ ಪ್ರದೇಶವಾಗಿ ಬಲಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ : ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರ್ನಾಟಕದ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇದ್ದು ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

The Meteorological Department has said that there is a possibility of heavy rain in the state in the coming days. A yellow alert has been issued in Pathanamthitta and Idukki districts today. A yellow alert is issued in six districts from Palakkad to Kasaragod tomorrow. Fishermen have also been warned not to venture into sea from tomorrow until the 20th of this month.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror