ಕೇರಳ ಸರ್ಕಾರದ ಲಾಟರಿಯಲ್ಲಿ 25 ಕೋಟಿ ಓಣಂ ಬಂಪರ್ ಲಾಟರಿ ವಿಜೇತ ಅನುಪ್ ಈಗ ಲಾಟರಿಯೇ ಬೇಡವಿತ್ತು ಎಂದು ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಲಾಟರಿ ಗೆದ್ದ ಸುದ್ದಿ ಬಹಿರಂಗವಾದ ಬಳಕೆ, ದಿನಬೆಳಗಾಗುತ್ತಿದ್ದಂತೆಯೇ ಮನೆ ಮುಂದೆ ಸಾಲ ಕೇಳುವವರ ಸಂಖ್ಯೆ ಹೆಚ್ಚಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಟರಿ ಗೆದ್ದಾಗ ಬಹಳಷ್ಟು ಸಂತಸವಾಗಿತ್ತು. ಆದರೆ ಈಗ ಮನೆಯಿಂದ ಹೊರಗೆ ಕಾಲಿಡಲೂ ಆಗುತ್ತಿಲ್ಲ. ಮಗುವಿಗೆ ಆನಾರೋಗ್ಯ ಕಾಡಿದರೆ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಎಲ್ಲಿ ಹೋದರೂ ಜನ ಹುಡುಕಿಕೊಂಡು ಬರುತ್ತಾರೆ ಎನ್ನುತ್ತಾರೆ ಅನುಪ್.
ಬಹುಮಾನದ ಹಣ ಇನ್ನೂ ಕೈಸೇರಿಲ್ಲ ಎಂದು ಹೇಳಿದರೂ ಯಾರೂ ನಂಬುವುದಿಲ್ಲ. ತನ್ನ ಬಗ್ಗೆ ಮಾಧ್ಯಮಗಳು ಸಾಕಷ್ಟು ಸುದ್ದಿ ಹಬ್ಬಿಸಿರುವುದರಿಂದ ಎಲ್ಲಿಗೂ ಹೋಗಲೂ ಸಾಧ್ಯವಾಗುತ್ತಿಲ್ಲ. ಈಗ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…