ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ

January 24, 2026
11:23 PM

ರಥಸಪ್ತಮಿಯ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಅರಣ್ಯ ಹಾಗೂ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಾಡಿನ ಬೆಂಕಿಯಿಂದ ಅರಣ್ಯ ಸಂಪತ್ತು ನಾಶವಾಗದಂತೆ ವಿಶೇಷ ಎಚ್ಚರ ವಹಿಸಬೇಕು ಎಂದು ನಿರ್ದೇಶಿಸಿದರು. ಕಾಡ್ಗಿಚ್ಚು ಪ್ರಕರಣಗಳನ್ನು ತಕ್ಷಣ ಗುರುತಿಸಿ ನಿಯಂತ್ರಣಕ್ಕೆ ತರಲು ಡ್ರೋನ್ ಸೌಲಭ್ಯ ಇರುವ ಪ್ರದೇಶಗಳಲ್ಲಿ ಕ್ಯಾಮೆರಾ ಮೂಲಕ ನಿಗಾವಹಿಸಬೇಕು ಎಂದು ಸಚಿವರು ತಿಳಿಸಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿ, ಸಿಬ್ಬಂದಿಯನ್ನು ಸದಾ ಎಚ್ಚರ ಸ್ಥಿತಿಯಲ್ಲಿ ಇರಿಸುವಂತೆ ಸೂಚಿಸಿದರು.

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರು–ಮೇವು ಒದಗಿಸಲು ಕ್ರಮ :  ಬೇಸಿಗೆಯಲ್ಲಿ ಕಾಡಿನೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಉಂಟಾಗದಂತೆ ಅಧಿಕಾರಿಗಳು ಮುಂಗಡವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವ ಖಂಡ್ರೆ ಹೇಳಿದರು.  ಜಲಗುಂಡಿಗಳಲ್ಲಿ ನೀರು ಕೊರತೆ ಆಗದಂತೆ ಸೌರ ಪಂಪುಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸುವ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆ ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ವಿಶೇಷ ವ್ಯವಸ್ಥೆ:  ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಮಾರ್ಗದಲ್ಲಿ ಸುರಕ್ಷತೆ ಹೆಚ್ಚಿಸಲು ಡ್ರೋನ್ ಕ್ಯಾಮೆರಾ ಅಳವಡಿಸಬೇಕೆಂದು ಸಚಿವರು ನಿರ್ದೇಶಿಸಿದರು.  ಕಾಲುದಾರಿ ಹಾಗೂ ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಗೃಹ ರಕ್ಷಕರು ಮತ್ತು ಸ್ಥಳೀಯ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಿ, ಭಕ್ತರಿಗೆ ನೆರವಾಗುವಂತೆ ಸೂಚನೆ ನೀಡಿದರು.

ಕಟ್ಟೆಚ್ಚರ ವಹಿಸಲು ಸಚಿವರ ನಿರ್ದೇಶನ:  ಕಾಡ್ಗಿಚ್ಚು ನಿಯಂತ್ರಣ ಹಾಗೂ ಅರಣ್ಯ ಸಂಪತ್ತು ಸಂರಕ್ಷಣೆಗೆ ಎಲ್ಲಾ ವಿಭಾಗಗಳು ಸಮನ್ವಯದಿಂದ ಕೆಲಸ ಮಾಡಬೇಕು. ಯಾವುದೇ ಅಸಾಧ್ಯ ಘಟನೆ ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror