Advertisement
ವೈರಲ್ ಸುದ್ದಿ

ಕಿಡ್ನಿ ಮಾರಾಟಕ್ಕಿದೆ…! ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು…! | ಹೀಗೊಂದು ಪೋಸ್ಟರ್ ವೈರಲ್….! |

Share

ಬೆಂಗಳೂರು ಅಂದ್ರೆ ಅದೊಂದು ಮಾಯಾನಗರಿ. ನೀವು ಕೆಲಸಕ್ಕೆಂದು ಹೋದರೆ ಕೈ ಹಿಡಿಯುತ್ತೆ… ಹಾಗೆ ಕೈ ಸುಡುತ್ತೆ ಕೂಡಾ…!.  ಇಂತಹ ಮಹಾನಗರಿಯಲ್ಲಿ ಒಂದು ಮನೆ ಹುಡುಕುವುದು ಅಂದರೆ ಅದು ತಮಾಷೆಯ ವಿಷಯವಲ್ಲ. ಅದರಲ್ಲೂ ಕೋಟಿ ಜನರ ಕನಸಿನ ನಗರಿಯಲ್ಲಿ ಸಿಂಗಲ್ ಬೆಡ್​ ರೂಂಗೂ ಬಾಯಿ ತೆರೆಯುವಷ್ಟು ಕಾಸು ಕೊಡ್ಬೇಕು. ಇಲ್ಲಿ ನಮಗೆ ಇಷ್ಟ ಆಗುವ ಮನೆ ಬೇಕು ಅಂದರೆ ದುಪ್ಪಟ್ಟು ಹಣ ನೀಡಲೇಬೇಕು. ಅದರಲ್ಲೂ ಓನರ್​ಗಳ ಒಂದಷ್ಟು ರೂಲ್ಸ್​ಗೆ ಓಕೆ ಅನ್ನಬೇಕು…! ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆ ಪಡೆಯಲು ಮನೆಗೆ ಠೇವಣಿ ನೀಡುವ ಬಗ್ಗೆ ವ್ಯಕ್ತಿಯೊಬ್ಬರ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಅನೇಕರು ಬಾರಿ ಕಮೆಂಟ್ ಗಳನ್ನೇ ಹಾಕುತ್ತಿದ್ದಾರೆ.

ಕಿಡ್ನಿ ಮಾರಾಟಕ್ಕಿದೆ….!

ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಸೆಕ್ಯೂರಿಟಿ ಡೆಪಾಸಿಟ್ ಇಡಲು ಹಣ ಬೇಕಿದೆ. ಹೀಗಾಗಿ ನನ್ನ ಎಡ ಕಿಡ್ನಿ ಮಾರಾಟಕ್ಕಿದೆ… ಇದು ತಮಾಷೆಗಾಗಿ, ಆದ್ರೆ ನನಗೆ ಇಂದಿರಾನಗರದಲ್ಲಿ ಮನೆ ಬೇಕಿದೆ. ನನ್ನ ಪ್ರೊಫೈಲ್​ಗಾಗಿ ಇಲ್ಲಿ ಸ್ಕ್ಯಾನ್ ಮಾಡಿ ಎಂದು ಕ್ಯೂಆರ್ ಕೋಡ್ ಹಾಕಿರುವ ಪೋಸ್ಟರನ್ನು ಮರಕ್ಕೆ ಅಂಟಿಸಲಾಗಿದೆ. ಸದ್ಯ ಈ ಪೋಸ್ಟರ್​ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಅನೇಕರು ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗೂ ನಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇದು ತಮಾಷೆಯ ಪೋಸ್ಟ್ ಆಗಿದ್ದರೂ ಜನಸಾಮಾನ್ಯರ ಗೋಳಾಗಿದೆ. ಟ್ವಿಟರ್ ಬಳಕೆದಾರ ಹೆಸರಿನಲ್ಲಿ ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಟೆಕ್ ಕ್ಯಾಪಿಟಲ್‌ ಬೆಂಗಳೂರಿನಲ್ಲಿ ಮನೆಗಳ ಹೆಚ್ಚಿನ ಬಾಡಿಗೆ ಮತ್ತು ಠೇವಣಿಗಳ ಬಗ್ಗೆ ಜನರು ಪ್ರತಿಕ್ರಿಯಿಸುವುದರೊಂದಿಗೆ ತಮ್ಮ ಅನುಭವವನ್ನೂ ಹಂಚಿಕೊಳ್ಳುತ್ತಿದ್ದಾರೆ. ಈ ಪೋಸ್ಟರ್ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಡಿಗೆ ಮತ್ತು ಠೇವಣಿಗಳ ಕುರಿತು ಚರ್ಚೆಗೆ ವೇದಿಕೆಯಾಗಿದೆ.

ಅನಿತಾ ರಾಣೆ ಎಂಬುವವರು, ಬೆಂಗಳೂರು ದೇಶ ಮತ್ತು ಪ್ರಪಂಚದ ಹಲವು ಭಾಗಗಳ ಜನರಿಗೆ ನೆಲೆಯಾಗಿದೆ. ಮಾರ್ಕೆಟಿಂಗ್ ತಂತ್ರಗಳನ್ನು ಆಶ್ರಯಿಸಬೇಕಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

ಅಭಿತೋಷ್ ಅನ್ನೋರು, ತಾವು ಮನೆ ಹುಡುಕುವಾಗ ಮಾಲೀಕರಿಗೆ ನಿನ್ನನ್ನು ಶ್ರೀಮಂತನನ್ನಾಗಿ ಮಾಡುವ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದೆ ಎಂದು ಕಮೆಂಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬದುಕಬೇಕು ಎಂದು ನಿರ್ಧರಿಸುವವರಿಗೆ ನಿಜಕ್ಕೂ ಇದೊಂದು ಎಚ್ಚರಿಕೆಯ ಗಂಟೆ. ದುಡಿದದ್ದೆಲ್ಲಾ ಬಾಡಿಗೆ ಕಟ್ಟಾಕೆ ಸರಿ ಎಂಬ ಮಾತು ಬೆಂಗಳೂರಿನಲ್ಲಿ ಜನಜನಿತ. ಕೊರನಾ ಮುಗಿದ ಮೇಲಂತು ಸಿಲಿಕಾನ್ ಸಿಟಿಯಲ್ಲಿ ಬಾಯಿಗೆ ಬಂದ ರೇಟ್ ಹೇಳುತ್ತಾರೆ. ಮನೆ ಖಾಲಿ ಇದ್ರು ತಾವು ನಿರೀಕ್ಷಿಸಿದಷ್ಟು ಭಾಡಿಗೆ ಬಂದಿಲ್ಲ ಅಂದ್ರೆ ಹಾಗೆ ಖಾಲಿ ಬೇಕಾದ್ರು ಇಟ್ಟುಕೊಳ್ಳುತ್ತಾರೆ, ಆದ್ರೆ ಬಾಡಿಗೆಗ ಮಾತ್ರ ಕೊಡಲ್ಲ. ಇದು ಸದ್ಯದ ಬೆಂಗಳೂರಿನ ಬಾಡಿಗೆ ಮನೆ ಮಾಲಿಕರ ಸ್ಟೇಟಸ್..

ಅವರ ಈ ಹಠಮಾರಿತನಕ್ಕೆ ಬಾಡಿಗೆದಾರರು ಕಿಡ್ನಿ ಮಾರಿ ಬದುಕುವ ಪರಿಸ್ಥಿತಿ ಬಾರದಿದ್ದರೆ ಅಷ್ಟೇ ಸಾಕು..!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

34 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

43 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

58 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago