Advertisement
ವೈರಲ್ ಸುದ್ದಿ

ಕಿಡ್ನಿ ಮಾರಾಟಕ್ಕಿದೆ…! ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು…! | ಹೀಗೊಂದು ಪೋಸ್ಟರ್ ವೈರಲ್….! |

Share

ಬೆಂಗಳೂರು ಅಂದ್ರೆ ಅದೊಂದು ಮಾಯಾನಗರಿ. ನೀವು ಕೆಲಸಕ್ಕೆಂದು ಹೋದರೆ ಕೈ ಹಿಡಿಯುತ್ತೆ… ಹಾಗೆ ಕೈ ಸುಡುತ್ತೆ ಕೂಡಾ…!.  ಇಂತಹ ಮಹಾನಗರಿಯಲ್ಲಿ ಒಂದು ಮನೆ ಹುಡುಕುವುದು ಅಂದರೆ ಅದು ತಮಾಷೆಯ ವಿಷಯವಲ್ಲ. ಅದರಲ್ಲೂ ಕೋಟಿ ಜನರ ಕನಸಿನ ನಗರಿಯಲ್ಲಿ ಸಿಂಗಲ್ ಬೆಡ್​ ರೂಂಗೂ ಬಾಯಿ ತೆರೆಯುವಷ್ಟು ಕಾಸು ಕೊಡ್ಬೇಕು. ಇಲ್ಲಿ ನಮಗೆ ಇಷ್ಟ ಆಗುವ ಮನೆ ಬೇಕು ಅಂದರೆ ದುಪ್ಪಟ್ಟು ಹಣ ನೀಡಲೇಬೇಕು. ಅದರಲ್ಲೂ ಓನರ್​ಗಳ ಒಂದಷ್ಟು ರೂಲ್ಸ್​ಗೆ ಓಕೆ ಅನ್ನಬೇಕು…! ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆ ಪಡೆಯಲು ಮನೆಗೆ ಠೇವಣಿ ನೀಡುವ ಬಗ್ಗೆ ವ್ಯಕ್ತಿಯೊಬ್ಬರ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಅನೇಕರು ಬಾರಿ ಕಮೆಂಟ್ ಗಳನ್ನೇ ಹಾಕುತ್ತಿದ್ದಾರೆ.

ಕಿಡ್ನಿ ಮಾರಾಟಕ್ಕಿದೆ….!

ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಸೆಕ್ಯೂರಿಟಿ ಡೆಪಾಸಿಟ್ ಇಡಲು ಹಣ ಬೇಕಿದೆ. ಹೀಗಾಗಿ ನನ್ನ ಎಡ ಕಿಡ್ನಿ ಮಾರಾಟಕ್ಕಿದೆ… ಇದು ತಮಾಷೆಗಾಗಿ, ಆದ್ರೆ ನನಗೆ ಇಂದಿರಾನಗರದಲ್ಲಿ ಮನೆ ಬೇಕಿದೆ. ನನ್ನ ಪ್ರೊಫೈಲ್​ಗಾಗಿ ಇಲ್ಲಿ ಸ್ಕ್ಯಾನ್ ಮಾಡಿ ಎಂದು ಕ್ಯೂಆರ್ ಕೋಡ್ ಹಾಕಿರುವ ಪೋಸ್ಟರನ್ನು ಮರಕ್ಕೆ ಅಂಟಿಸಲಾಗಿದೆ. ಸದ್ಯ ಈ ಪೋಸ್ಟರ್​ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಅನೇಕರು ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗೂ ನಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇದು ತಮಾಷೆಯ ಪೋಸ್ಟ್ ಆಗಿದ್ದರೂ ಜನಸಾಮಾನ್ಯರ ಗೋಳಾಗಿದೆ. ಟ್ವಿಟರ್ ಬಳಕೆದಾರ ಹೆಸರಿನಲ್ಲಿ ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಟೆಕ್ ಕ್ಯಾಪಿಟಲ್‌ ಬೆಂಗಳೂರಿನಲ್ಲಿ ಮನೆಗಳ ಹೆಚ್ಚಿನ ಬಾಡಿಗೆ ಮತ್ತು ಠೇವಣಿಗಳ ಬಗ್ಗೆ ಜನರು ಪ್ರತಿಕ್ರಿಯಿಸುವುದರೊಂದಿಗೆ ತಮ್ಮ ಅನುಭವವನ್ನೂ ಹಂಚಿಕೊಳ್ಳುತ್ತಿದ್ದಾರೆ. ಈ ಪೋಸ್ಟರ್ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಡಿಗೆ ಮತ್ತು ಠೇವಣಿಗಳ ಕುರಿತು ಚರ್ಚೆಗೆ ವೇದಿಕೆಯಾಗಿದೆ.

ಅನಿತಾ ರಾಣೆ ಎಂಬುವವರು, ಬೆಂಗಳೂರು ದೇಶ ಮತ್ತು ಪ್ರಪಂಚದ ಹಲವು ಭಾಗಗಳ ಜನರಿಗೆ ನೆಲೆಯಾಗಿದೆ. ಮಾರ್ಕೆಟಿಂಗ್ ತಂತ್ರಗಳನ್ನು ಆಶ್ರಯಿಸಬೇಕಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

ಅಭಿತೋಷ್ ಅನ್ನೋರು, ತಾವು ಮನೆ ಹುಡುಕುವಾಗ ಮಾಲೀಕರಿಗೆ ನಿನ್ನನ್ನು ಶ್ರೀಮಂತನನ್ನಾಗಿ ಮಾಡುವ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದೆ ಎಂದು ಕಮೆಂಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬದುಕಬೇಕು ಎಂದು ನಿರ್ಧರಿಸುವವರಿಗೆ ನಿಜಕ್ಕೂ ಇದೊಂದು ಎಚ್ಚರಿಕೆಯ ಗಂಟೆ. ದುಡಿದದ್ದೆಲ್ಲಾ ಬಾಡಿಗೆ ಕಟ್ಟಾಕೆ ಸರಿ ಎಂಬ ಮಾತು ಬೆಂಗಳೂರಿನಲ್ಲಿ ಜನಜನಿತ. ಕೊರನಾ ಮುಗಿದ ಮೇಲಂತು ಸಿಲಿಕಾನ್ ಸಿಟಿಯಲ್ಲಿ ಬಾಯಿಗೆ ಬಂದ ರೇಟ್ ಹೇಳುತ್ತಾರೆ. ಮನೆ ಖಾಲಿ ಇದ್ರು ತಾವು ನಿರೀಕ್ಷಿಸಿದಷ್ಟು ಭಾಡಿಗೆ ಬಂದಿಲ್ಲ ಅಂದ್ರೆ ಹಾಗೆ ಖಾಲಿ ಬೇಕಾದ್ರು ಇಟ್ಟುಕೊಳ್ಳುತ್ತಾರೆ, ಆದ್ರೆ ಬಾಡಿಗೆಗ ಮಾತ್ರ ಕೊಡಲ್ಲ. ಇದು ಸದ್ಯದ ಬೆಂಗಳೂರಿನ ಬಾಡಿಗೆ ಮನೆ ಮಾಲಿಕರ ಸ್ಟೇಟಸ್..

ಅವರ ಈ ಹಠಮಾರಿತನಕ್ಕೆ ಬಾಡಿಗೆದಾರರು ಕಿಡ್ನಿ ಮಾರಿ ಬದುಕುವ ಪರಿಸ್ಥಿತಿ ಬಾರದಿದ್ದರೆ ಅಷ್ಟೇ ಸಾಕು..!

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

53 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago