Advertisement
ಸುದ್ದಿಗಳು

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

Share

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ, ಕಿಡ್ನಿ ಸ್ಟೋನ್‌ (ಮೂತ್ರಪಿಂಡದ ಕಲ್ಲು) ಸಮಸ್ಯೆ ಹೆಚ್ಚುತ್ತಿರುವುದು ಸಾಮಾನ್ಯವಾಗಿದೆ. ಹೆಚ್ಚಿನ ಬಿಸಿಲು, ಕಡಿಮೆ ನೀರು ಸೇವನೆ ಹಾಗೂ ಅಧಿಕ ಬೆವರುದ ಪರಿಣಾಮ ದೇಹದಲ್ಲಿ ನೀರಿನಾಂಶ ಕಡಿಮೆಯಾಗುತ್ತದೆ. ಇದರಿಂದ ಮೂತ್ರ ಹೆಚ್ಚು ಸಾಂದ್ರತೆಯಾಗಿದ್ದು, ಕ್ಯಾಲ್ಸಿಯಂ, ಯೂರಿಕ್ ಆಸಿಡ್‌ ಸೇರಿದಂತೆ ಕೆಲವು ಖನಿಜಗಳು ಸೇರಿ ನಿಧಾನವಾಗಿ ಕಲ್ಲಿನ ರೂಪ ಪಡೆಯುವ ಸಾಧ್ಯತೆ ಹೆಚ್ಚುತ್ತದೆ.

ವೈದ್ಯರ ಪ್ರಕಾರ, ಬೇಸಿಗೆಯಲ್ಲಿ ಸರಿಯಾದ ನೀರಿನ ಸೇವನೆ ಇಲ್ಲದಿದ್ದರೆ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ವಿಶೇಷವಾಗಿ ಹೊರಾಂಗಣದಲ್ಲಿ ಹೆಚ್ಚು ಕೆಲಸ ಮಾಡುವವರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಿಡ್ನಿ ಸ್ಟೋನ್‌ನ ಸಾಮಾನ್ಯ ಲಕ್ಷಣಗಳು

  • ಸೊಂಟ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರ ನೋವು
  • ಮೂತ್ರ ವಿಸರ್ಜನೆಯ ಮೊದಲು, ಸಮಯದಲ್ಲಿ ಅಥವಾ ನಂತರ ನೋವು ಕಾಣಿಸಿಕೊಳ್ಳುವುದು
  • ಪದೇ ಪದೇ ಮೂತ್ರಕ್ಕೆ ಹೋಗುವ ಭಾವನೆ
  • ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು
  • ವಾಂತಿ, ಆಯಾಸ
  • ಕೆಲವೊಮ್ಮೆ ಜ್ವರ ಕಾಣಿಸಬಹುದು

ಹೆಚ್ಚಿನ ಸಂದರ್ಭಗಳಲ್ಲಿ ಈ ಲಕ್ಷಣಗಳು ರಾತ್ರಿ ಅಥವಾ ಮಧ್ಯರಾತ್ರಿ ಸಮಯದಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ನಿದ್ರೆಗೆ ತೊಂದರೆ ಉಂಟುಮಾಡಬಹುದು.

ಬೇಸಿಗೆಯಲ್ಲಿ ಕಿಡ್ನಿ ಸ್ಟೋನ್ ತಪ್ಪಿಸಿಕೊಳ್ಳಲು ಏನು ಮಾಡಬೇಕು?

  • ದಿನಕ್ಕೆ ಕನಿಷ್ಠ 3–4 ಲೀಟರ್ ನೀರು ಕುಡಿಯಿರಿ
  • ಕಲ್ಲಂಗಡಿ, ಸೌತೆಕಾಯಿ, ಎಳನೀರು ಮುಂತಾದ ನೀರಿನಾಂಶ ಹೆಚ್ಚಿರುವ ಆಹಾರ ಸೇವಿಸಿ
  • ಉಪ್ಪಿನ ಪ್ರಮಾಣ ಕಡಿಮೆ ಮಾಡಿ
  • ತಂಪು ಪಾನೀಯಗಳು ಹಾಗೂ ಪ್ಯಾಕೇಜ್ಡ್ ಜ್ಯೂಸ್‌ ಕಡಿಮೆ ಸೇವಿಸಿ
  • ಮೂತ್ರವನ್ನು ತಡೆಯುವ ಅಭ್ಯಾಸ ಬಿಡಿ
  • ಬಿಸಿಲಿನಲ್ಲಿ ಹೆಚ್ಚು ಕೆಲಸ ಮಾಡುವವರು ಆಗಾಗ ನೀರು ಸೇವಿಸಬೇಕು

ಹೋಮಿಯೋಪಥಿ ಚಿಕಿತ್ಸೆ ಸಹಾಯಕವೇ?

ಹೋಮಿಯೋಪಥಿಯಲ್ಲಿ ವ್ಯಕ್ತಿಯ ಲಕ್ಷಣಗಳು, ನೋವಿನ ಸ್ವಭಾವ ಹಾಗೂ ದೇಹದ ಸ್ಥಿತಿಯನ್ನು ಗಮನಿಸಿ ವೈಯಕ್ತಿಕ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸರಿಯಾದ ಚಿಕಿತ್ಸೆಯಿಂದ:

  • ನೋವು ಕಡಿಮೆಯಾಗಲು
  • ಸ್ಟೋನ್‌ ಸ್ವಾಭಾವಿಕವಾಗಿ ಹೊರಬರಲು ಸಹಾಯವಾಗಲು
  • ಮರುಕಳಿಸುವಿಕೆ ಕಡಿಮೆಯಾಗಲು
  • ದೇಹದ ಸಮತೋಲನ ಸುಧಾರಿಸಲು ನೆರವಾಗಬಹುದು ಎಂದು ವೈದ್ಯರು ತಿಳಿಸುತ್ತಾರೆ.

ಹೆಚ್ಚಿನ ಮಾಹಿತಿ ಹಾಗೂ ಚಿಕಿತ್ಸೆಗೆ:

ಶ್ರೀ ಹೋಮಿಯೋಕೇರ್ ಹೋಮಿಯೋಪತಿ ಚಿಕಿತ್ಸಾಲಯ
ಡಾ. ಆದಿತ್ಯ ಸಿ
ಮೊ.: 8073052529

Kidney stone cases tend to rise during summer due to dehydration, excessive sweating, and low water intake. Doctors advise drinking enough water, consuming water-rich foods, and avoiding excessive salt and soft drinks to reduce the risk. Early symptoms include severe lower abdominal pain, burning urination, and blood in urine.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

12 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

2 days ago