ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಬಾಲಕ |

October 25, 2022
3:58 PM

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್​ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್​ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.

ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಖರೀದಿ ಮಾಡಿದ್ದರು. ಈ ದಾರವನ್ನು ಕುತ್ತಿಗೆಗೆ ಹಾಕಿಕೊಂಡಿದ್ದರಿಂದ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ  ತಂದೆಗೆ ಏನಾಗಿದೆ ಎಂದು ತಿಳಿದಿರಲಿಲ್ಲ. ತಕ್ಷಣವೇ  ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ವರ್ಧನ್ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror