ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.
ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಖರೀದಿ ಮಾಡಿದ್ದರು. ಈ ದಾರವನ್ನು ಕುತ್ತಿಗೆಗೆ ಹಾಕಿಕೊಂಡಿದ್ದರಿಂದ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ ತಂದೆಗೆ ಏನಾಗಿದೆ ಎಂದು ತಿಳಿದಿರಲಿಲ್ಲ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ವರ್ಧನ್ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…