ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.
ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಖರೀದಿ ಮಾಡಿದ್ದರು. ಈ ದಾರವನ್ನು ಕುತ್ತಿಗೆಗೆ ಹಾಕಿಕೊಂಡಿದ್ದರಿಂದ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ ತಂದೆಗೆ ಏನಾಗಿದೆ ಎಂದು ತಿಳಿದಿರಲಿಲ್ಲ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ವರ್ಧನ್ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…