ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.
– ಅಂತರ್ಜಾಲ ಮಾಹಿತಿ
Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…