Advertisement
MIRROR FOCUS

ಚಾರ್ಮಾಡಿ ಘಾಟಿಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌ : ಕೆಟ್ಟು ನಿಂತ 16 ಚಕ್ರದ ಸಿಮೆಂಟ್‌ ಲಾರಿ

Share

ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

Advertisement
Advertisement
Advertisement
Advertisement

ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.

Advertisement

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

2 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

5 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

18 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

19 hours ago