ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.
– ಅಂತರ್ಜಾಲ ಮಾಹಿತಿ
Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers. ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…