ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.
– ಅಂತರ್ಜಾಲ ಮಾಹಿತಿ
Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…