Advertisement
MIRROR FOCUS

ಎಮ್ಮೇ ನಿನಗೆ ಸಾಟಿ ಇಲ್ಲ..! | ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ | 1 ಲೀಟರ್ ಬೆಲೆ ಎಷ್ಟು..?

Share

ಹಾಲನ್ನು(Milk) ಭೂಲೋಕದ ಅಮೃತ(Nectar) ಎನ್ನಲಾಗುತ್ತದೆ. ಆದರೆ ಹಸುವಿನ ಹಾಲಿಗೆ(Cow Milk) ಮೊದಲ ಪ್ರಾಶಸ್ತ್ಯ. ತದನಂತರ ಎಮ್ಮೆ, ಮೇಕೆ, ಕತ್ತೆ ಹಾಲು(Baffalo, Goat, Donkey) ಹೀಗೆ. ದನದ ಹಾಲಿನಷ್ಟೇ ಪ್ರಾಮುಖ್ಯತೆ ಇರುವುದು ಎಮ್ಮೆ ಹಾಲಿಗೆ. ಹಳ್ಳಿಗಳಲ್ಲಿ ಇಂದಿಗೂ ಎಮ್ಮೆ ಹಾಲಿನ ಉಪಯೋಗ ಇದೆ. ಆದರೆ ಪಟ್ಟಣಗಳಲ್ಲಿ ನಂದಿನಿ ಪ್ಯಾಕೆಟ್‌(Nandini milk) ಹಾಲಿನದ್ದೇ ಕಾರುಬಾರು. ಅದರಲ್ಲೂ ದನದ ಹಾಲಿಗೆ ಡಿಮ್ಯಾಂಡ್.‌ ಇದೀಗ ಎಮ್ಮೆ ಹಾಲನ್ನು ಕೆಎಂಎಫ್‌ ನವರು ಪ್ಯಾಕೆಟ್‌ ತುಂಬಿ ಮಾರಲು ಆರಂಭಿಸಿದ್ದಾರೆ. ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ.

Advertisement

ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್‌ಗೆ 39.50 ರೂಪಾಯಿಗೆ (5 ರೂ. ಪ್ರೋತ್ಸಾಹಧನವನ್ನೊಳಗೊಂಡು) ಖರೀದಿ ಮಾಡಲಾಗುತ್ತಿದೆ.

ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು (Nandini Buffalo Milk) ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಅಂದು ಪ್ರತಿದಿನ ಸುಮಾರು 5,000 ಲೀಟರ್ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿತ್ತು. ಸದ್ಯ ಬೆಂಗಳೂರು ಸೇರಿದಂತೆ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಮಾರುಕಟ್ಟೆಗಳಲ್ಲಿಯೂ ಎಮ್ಮೆ ಹಾಲು ಮಾರಾಟಕ್ಕೆ ಕೆಎಂಎಫ್ ನಿರ್ಧಾರ ಮಾಡಿದೆ.

KMF (Buffalo Milk) is available in the market from Friday (today) in the state and there is a huge demand from consumers. 60 per liter of milk. is scheduled. Milk unions are supplied with 60 thousand liters of buffalo milk every day. It is being purchased from farmers at Rs 39.50 per liter (including Rs 5 subsidy). – ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

11 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

17 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

17 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago