ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |

November 21, 2024
7:25 PM

ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ ವಿಸ್ತರಿಸುವ ಸಲುವಾಗಿ ನಮ್ಮ ನಂದಿನಿ ಹಾಲು ಮತ್ತು ಮೊಸರು ಈಗ ದೆಹಲಿಗೆ ಕಾಲಿಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ಕೆಎಂಎಫ್ ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ತನ್ನ ಮಾರಾಟ ಕೇಂದ್ರಗಳನ್ನು ಹೊಂದಿದೆ. ಕನ್ನಡದ ರೈತರ ಶ್ರಮದ ಸಂಸ್ಥೆಯೊಂದು ಕನ್ನಡತನವನ್ನು ಉಳಿಸಿಕೊಂಡು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ.  ರಾಜ್ಯದಲ್ಲಿ  ಪ್ರತಿದಿನ  92  ರಿಂದ 93 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು.   ರೈತರಿಂದ ಲೀಟರ್‌ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು,  ರಾಜ್ಯ ಸರ್ಕಾರ  ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ ಎಂದು ಹೇಳಿದರು.  ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆರಂಭಿಕ ಹಂತದಲ್ಲಿ 2.5  ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror