ಕೊಡಗು ಜಿಲ್ಲೆಯಲ್ಲಿ ಸರ್ಕಾರದ ಕಂದಾಯ ಇಲಾಖೆ, ಸರ್ಕಾರದ ಹೆಸರಿನಲ್ಲಿರುವ ಪೈಸಾರಿ ಜಮೀನನ್ನು ಸಿ ಮತ್ತು ಡಿ ಜಮೀನೆಂದು ವರ್ಗೀಕರಿಸಿ ಅರಣ್ಯ ಇಲಾಖೆಗೆ ವರ್ಗಾವಣೆಯ ಸಂಬಂಧ ಸರ್ಕಾರ ಸಮಿತಿಯನ್ನು ರಚಿಸಿದೆ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವಿನ ಸಮಸ್ಯೆಗಳು, ವಸ್ತುಸ್ಥಿತಿ ವಿವರಗಳ ಕುರಿತು ಅಧ್ಯಯನ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವ ಸಲಹಾತ್ಮಕ ಅಂಶಗಳೊಂದಿಗೆ ವರದಿ ನೀಡಲು ಕೊಡಗು ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪ್ರಭಾಕರ ಕೆ.ಎಸ್. ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರಾಗಿ ಎ.ಎಸ್. ಭಾನುಪ್ರಕಾಶ್, ಪೂವಯ್ಯ ಜಯರಾಮ್, ಅವರನ್ನು ನೇಮಿಸಲಾಗಿದೆ. ಈ ಸಮಿತಿಯು ಮುಂದಿನ 6 ತಿಂಗಳೊಳಗಾಗಿ ಅನುಪಾಲನಾ ವರದಿ ನೀಡುವಂತೆ ಕಾಲಾವಧಿ ನಿಗದಿಪಡಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…