Advertisement
ರಾಜ್ಯ

#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |

Share

ಕಳೆದ 3-4 ದಿನಗಳ ಹಿಂದೆ ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆ ಕೊಡಗಿನಲ್ಲಿ ಈ ಬಾರಿ ಮಳೆ ಕೊರತೆ ಕಾಡುತ್ತಿದೆ ಎಂಬ ವರದಿಯೊಂದು ಪ್ರಕಟವಾಗಿತ್ತು. ಆದರೆ ಕಳೆದ 2-3 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜುಲೈ 24 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement
Advertisement

ಎಡೆಬಿಡದೆ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ ಈ ಹಿನ್ನೆಲೆ ಸೋಮವಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ್ ರಜೆ  ಘೋಷಣೆ ಮಾಡಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

Advertisement
ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಕ್ಷಣಕ್ಷಣಕ್ಕೂ ಹೆಚ್ಚಾಗಿದ್ದು ಸೋಮವಾರ ಬೆಳಗ್ಗೆ 8:30 ರವರೆಗೆ ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ ಯಾಗಿದ್ದು ನಾಪೋಕ್ಲು ಅಯ್ಯಗೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇತ್ತ ವಿರಾಜಪೇಟೆ ತಾಲೂಕಿನ ಭೇತ್ರಿ ಬಳಿ ಕಾವೇರಿ ನದಿಯ ನೀರು ಸೇತುವೆ ಮಟ್ಟಕ್ಕೆ ಬಂದಿದೆ.

ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದೆ. ಅಲ್ಲದೆ ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ. ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು ಸೋಮವಾರ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಒಳಹರಿವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ಇದೀಗ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಮತ್ತೊಂದೆಡೆ ಕಾವೇರಿ ನದಿಯ ಅಪಾಯ ಮಟ್ಟ ಏರಿಕೆ ಆಗುತ್ತಾ ಇರುವುದರಿಂದ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿ ಗ್ರಾಮದಲ್ಲಿ ಕಾವೇರಿ ನದಿಯು ಕೃಷಿ ಚಟುವಟಿಕೆ ಮಾಡುವ ಗದ್ದೆಗಳ ಮೇಲೆ ನೀರು ಹರಿಯುತ್ತಿದ್ದು ಇದೀಗ ರೈತಾಪಿ ವರ್ಗದ ಜನರು ಕಂಗಾಲಾಗಿದ್ದಾರೆ. ಅಲ್ಲದೇ ಪ್ರತಿ ವರ್ಷ ಮಳೆ ಬಂದರೆ ಯಾವುದೇ ರಕ್ಷಣೆ ಇಲ್ಲದೇ ಮಳೆಗಾಲ ಕಳೆಯುವವರೆಗೂ ಕಾಳಜಿ ಕೇಂದ್ರಗಳೇ ತಮಗೆ ಗತಿ ಎಂದು ಇಲ್ಲಿನ ಸ್ಥಳೀಯರು ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ.

Advertisement

ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಅಕ್ಷರಶಃ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

2 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

19 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

19 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

20 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

20 hours ago