Advertisement
ರಾಜ್ಯ

#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |

Share

ಕಳೆದ 3-4 ದಿನಗಳ ಹಿಂದೆ ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆ ಕೊಡಗಿನಲ್ಲಿ ಈ ಬಾರಿ ಮಳೆ ಕೊರತೆ ಕಾಡುತ್ತಿದೆ ಎಂಬ ವರದಿಯೊಂದು ಪ್ರಕಟವಾಗಿತ್ತು. ಆದರೆ ಕಳೆದ 2-3 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜುಲೈ 24 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಎಡೆಬಿಡದೆ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ ಈ ಹಿನ್ನೆಲೆ ಸೋಮವಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ್ ರಜೆ  ಘೋಷಣೆ ಮಾಡಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಕ್ಷಣಕ್ಷಣಕ್ಕೂ ಹೆಚ್ಚಾಗಿದ್ದು ಸೋಮವಾರ ಬೆಳಗ್ಗೆ 8:30 ರವರೆಗೆ ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ ಯಾಗಿದ್ದು ನಾಪೋಕ್ಲು ಅಯ್ಯಗೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇತ್ತ ವಿರಾಜಪೇಟೆ ತಾಲೂಕಿನ ಭೇತ್ರಿ ಬಳಿ ಕಾವೇರಿ ನದಿಯ ನೀರು ಸೇತುವೆ ಮಟ್ಟಕ್ಕೆ ಬಂದಿದೆ.

ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದೆ. ಅಲ್ಲದೆ ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ. ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು ಸೋಮವಾರ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಒಳಹರಿವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ಇದೀಗ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಮತ್ತೊಂದೆಡೆ ಕಾವೇರಿ ನದಿಯ ಅಪಾಯ ಮಟ್ಟ ಏರಿಕೆ ಆಗುತ್ತಾ ಇರುವುದರಿಂದ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿ ಗ್ರಾಮದಲ್ಲಿ ಕಾವೇರಿ ನದಿಯು ಕೃಷಿ ಚಟುವಟಿಕೆ ಮಾಡುವ ಗದ್ದೆಗಳ ಮೇಲೆ ನೀರು ಹರಿಯುತ್ತಿದ್ದು ಇದೀಗ ರೈತಾಪಿ ವರ್ಗದ ಜನರು ಕಂಗಾಲಾಗಿದ್ದಾರೆ. ಅಲ್ಲದೇ ಪ್ರತಿ ವರ್ಷ ಮಳೆ ಬಂದರೆ ಯಾವುದೇ ರಕ್ಷಣೆ ಇಲ್ಲದೇ ಮಳೆಗಾಲ ಕಳೆಯುವವರೆಗೂ ಕಾಳಜಿ ಕೇಂದ್ರಗಳೇ ತಮಗೆ ಗತಿ ಎಂದು ಇಲ್ಲಿನ ಸ್ಥಳೀಯರು ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಅಕ್ಷರಶಃ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

3 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

12 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

13 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

18 hours ago