Advertisement
ಸುದ್ದಿಗಳು

ನಂಬಬೇಕು ಅದೃಷ್ಟ, ಕೊಹ್ಲಿಯಿಂದ ದುರಾದೃಷ್ಟವೇ?

Share

ಬುಧವಾರ ಅಫ್ಘಾನಿಸ್ತಾನ ವಿರುದ್ಧ ನಡೆದ ಟಿ 20 ವಿಶ್ವಕಪ್ ನಲ್ಲಿ ಭಾರತ ಹಳೆಯ ಬ್ಯಾಟಿಂಗ್ ಖದರ್ ತೋರಿಸಿದ್ದು, ಸಂಘಟಿತ ಪ್ರದರ್ಶನ ಸಂತೋಷವೇ. ಆದರೆ ಸೆಮೀಫೈನಲ್ ಗೆ ಅದೃಷ್ಟ ಕೈ ಹಿಡಿಯುವುದೆ ಎಂಬ ಪ್ರಶ್ನೆ ಉದ್ಭವಿಸಿದೆ.
ಹೌದು,ಕ್ರೀಡಾಭಿಮಾನಿಗಳು ಯೋಚಿಸಬೇಕಾದ ವಿಚಾರವೇ. ಕಾಗದದ ಮೇಲೆ ಟಿ 20 ಮಾದರಿಗೆ ಹೇಳಿ ಮಾಡಿಸಿದಂತೆ ಬಲಾಢ್ಯ ತಂಡವೇ ಆಗಿದ್ದರೂ ಒಗ್ಗಟಿನ ಕೊರತೆಯಿಂದ ಹಾಗೂ ಸ್ವಯಂ ತಪ್ಪುಗಳಿಂದ ಸೆಮಿಸ್ ಹಾದಿ ದುರ್ಗಮಗೊಳಿಸಿಕೊಂಡಿದೆ ಎನ್ನುವುದೂ ನಿಜ ಆಗಿದೆ.

ಆಫ್ಘನ್ ವಿರುದ್ಧ ತೋರಿದ ಅತ್ಯದ್ಭುತ ತಾಕತ್ತಿನ ಪ್ರದರ್ಶನ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ಬಂದಿದ್ದರೆ ಅಭಿಮಾನಿಗಳ ಹರ್ಷಕ್ಕೆ ಎಲ್ಲೆಯೇ ಇರುತ್ತಿರಲಿಲ್ಲವೇನೊ. ವಾಸ್ತವದಲ್ಲಿ ಭಾರತಕ್ಕೆ ಹೋಲಿಸಿದರೆ ಅಫ್ಘಾನಿಸ್ತಾನ ಇನ್ನೂ ಕ್ರಿಕೆಟ್ ಕೂಸು.ಆದರೂ ಭಾರತಕ್ಕಿಂತ ಎರಡು ಸ್ಥಾನ ಮೇಲಿರುವುದು ಹಾಗೂ ಎಲ್ಲ ವಿಭಾಗಗಳಲ್ಲಿಯೂ ಭಾರತಕ್ಕೆ ಸಮಾನ ಪ್ರದರ್ಶನ ನೀಡುತ್ತಿರುವುದು ನಮ್ಮ ಪಾಲಿನ ದುರಾದೃಷ್ಟ.

ಇಲ್ಲಿ ಮುಖ್ಯವಾಗಿ ಕಂಡು ಬರುವ ತಪ್ಪುಗಳು ಇವುಗಳೇ ಆಗಿವೆ. ನಾಯಕ ವಿರಾಟ್ ಕೊಹ್ಲಿಯ ಅತಿರೇಖದ ಎಡವಟ್ಟುಗಳು ಹಾಗೂ ಅನಗತ್ಯ ಪ್ರಯೋಗಗಳು. ಕೊಹ್ಲಿ ಕೋರಿಕೆ ಮೇರೆ ಚಾಂಪಿಯನ್ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನು ಬಿಸಿಸಿಐ ಮೆಂಟರ್ ಎಂದು ನೇಮಕ ಮಾಡಿದರೂ ಅವರ ಸಲಹೆಗಳಿಗೆ ಕಿಮ್ಮತ್ತಿನ ಬೆಲೆ ಇಲ್ಲ. ಪರಿಣಾಮ ಗೆಲ್ಲುವಂಥ ಪಂದ್ಯಗಳನ್ನು ಸುಲಭವಾಗಿ ಕೈ ಚೆಲ್ಲಿದ್ದು.

ಇದೀಗ ಭಾರತದ ಸೆಮಿಸ್ ಹಾದಿ ಸುಗಮಗೊಳ್ಳಲು ಮುಂದಿನ ಎರಡೂ ಪಂದ್ಯಗಳನ್ನು ಭಾರಿ ಅಂತರದಿಂದ ಗೆಲ್ಲಬೇಕಿದ್ದು,ಜತೆಗೆ ಬದ್ಧ ವೈರಿ ಪಾಕಿಸ್ತಾನ ಮುಂದಿನ ಪಂದ್ಯದಲ್ಲಿ ಗೆಲ್ಲಬೇಕಿದೆ.ಜತೆಗೆ ನ್ಯೂಜಿಲ್ಯಾಂಡ್ ಮುಂದಿನ ಪಂದ್ಯದಲ್ಲಿ ಸೋಲಬೇಕಿದೆ.ಇದರಿಂದ ಮಾತ್ರ ಭಾರತದ ಸೆಮಿಸ್ ಹಾದಿ ಸುಗಮವಾಗಲಿದೆ ಎಂದು ಕ್ರಿಕೆಟ್ ಪಂಡಿಥ ಲೆಕ್ಕಾಚಾರ.

ಹಿರಿಯ ಹಾಗೂ ಮಾಜಿ ಆಟಗಾರರ ಆಕ್ರೋಶ, ಧೋನಿ ಕೊಹ್ಲಿ ನಡುವೆ ಇದೇ ವಿಶೇಷ ವ್ಯತ್ಯಾಸ. ಧೋನಿಯವರು ಹಿರಿಯ ಹಾಗೂ ಮಾಜಿ ಆಟಗಾರರ ಸಲಹೆಗಳನ್ನು ಗೌರವಿಸಿದರೆ,ಕೊಹ್ಲಿ ತಿರಸ್ಕರಿಸುವ ಮೂಲಕ ಎಡವಟ್ಟು ನಿರ್ಧಾರಗಳಿಗೆ ಕೈ ಹಾಕುತ್ತಿರುವುದೇ ತಂಡಕ್ಕೆ ಬಹು ದೊಡ್ಡ ಹಿನ್ನಡೆ. ಜತೆಗೆ ಡಿ.ಆರ್.ಎಸ್ ಬಳಕೆಯಲ್ಲಿಯೂ ವಿಫಲವಾಗುತ್ತಿರುವುದು ಕೂಡ ದುಬಾರಿಯಾಗುತ್ತಿದೆ.

ಏನೆ ಆಗಲಿ, ಮುಂದಿನ ಪಂದ್ಯಗಳಲ್ಲಿ ಕೊಹ್ಲಿ ಇಂತಹ ತಪ್ಪುಗಳನ್ನು ಪುನರಾವರ್ತಿಸದೆ ಇದ್ದರೆ ಹಾಗೂ ಅದೃಷ್ಟ ಕೈಗೂಡಿದರೆ ಮಾತ್ರ ವಿಶ್ವಕಪ್ ನಮ್ಮದಾಗಲಿದೆ ಎಂಬುದು ಸತ್ಯ.

# ಬಾಲಚಂದ್ರ ಕೋಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

11 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

11 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

11 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

11 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago