Advertisement
ಸುದ್ದಿಗಳು

ನಂಬಬೇಕು ಅದೃಷ್ಟ, ಕೊಹ್ಲಿಯಿಂದ ದುರಾದೃಷ್ಟವೇ?

Share

ಬುಧವಾರ ಅಫ್ಘಾನಿಸ್ತಾನ ವಿರುದ್ಧ ನಡೆದ ಟಿ 20 ವಿಶ್ವಕಪ್ ನಲ್ಲಿ ಭಾರತ ಹಳೆಯ ಬ್ಯಾಟಿಂಗ್ ಖದರ್ ತೋರಿಸಿದ್ದು, ಸಂಘಟಿತ ಪ್ರದರ್ಶನ ಸಂತೋಷವೇ. ಆದರೆ ಸೆಮೀಫೈನಲ್ ಗೆ ಅದೃಷ್ಟ ಕೈ ಹಿಡಿಯುವುದೆ ಎಂಬ ಪ್ರಶ್ನೆ ಉದ್ಭವಿಸಿದೆ.
ಹೌದು,ಕ್ರೀಡಾಭಿಮಾನಿಗಳು ಯೋಚಿಸಬೇಕಾದ ವಿಚಾರವೇ. ಕಾಗದದ ಮೇಲೆ ಟಿ 20 ಮಾದರಿಗೆ ಹೇಳಿ ಮಾಡಿಸಿದಂತೆ ಬಲಾಢ್ಯ ತಂಡವೇ ಆಗಿದ್ದರೂ ಒಗ್ಗಟಿನ ಕೊರತೆಯಿಂದ ಹಾಗೂ ಸ್ವಯಂ ತಪ್ಪುಗಳಿಂದ ಸೆಮಿಸ್ ಹಾದಿ ದುರ್ಗಮಗೊಳಿಸಿಕೊಂಡಿದೆ ಎನ್ನುವುದೂ ನಿಜ ಆಗಿದೆ.

ಆಫ್ಘನ್ ವಿರುದ್ಧ ತೋರಿದ ಅತ್ಯದ್ಭುತ ತಾಕತ್ತಿನ ಪ್ರದರ್ಶನ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ಬಂದಿದ್ದರೆ ಅಭಿಮಾನಿಗಳ ಹರ್ಷಕ್ಕೆ ಎಲ್ಲೆಯೇ ಇರುತ್ತಿರಲಿಲ್ಲವೇನೊ. ವಾಸ್ತವದಲ್ಲಿ ಭಾರತಕ್ಕೆ ಹೋಲಿಸಿದರೆ ಅಫ್ಘಾನಿಸ್ತಾನ ಇನ್ನೂ ಕ್ರಿಕೆಟ್ ಕೂಸು.ಆದರೂ ಭಾರತಕ್ಕಿಂತ ಎರಡು ಸ್ಥಾನ ಮೇಲಿರುವುದು ಹಾಗೂ ಎಲ್ಲ ವಿಭಾಗಗಳಲ್ಲಿಯೂ ಭಾರತಕ್ಕೆ ಸಮಾನ ಪ್ರದರ್ಶನ ನೀಡುತ್ತಿರುವುದು ನಮ್ಮ ಪಾಲಿನ ದುರಾದೃಷ್ಟ.

ಇಲ್ಲಿ ಮುಖ್ಯವಾಗಿ ಕಂಡು ಬರುವ ತಪ್ಪುಗಳು ಇವುಗಳೇ ಆಗಿವೆ. ನಾಯಕ ವಿರಾಟ್ ಕೊಹ್ಲಿಯ ಅತಿರೇಖದ ಎಡವಟ್ಟುಗಳು ಹಾಗೂ ಅನಗತ್ಯ ಪ್ರಯೋಗಗಳು. ಕೊಹ್ಲಿ ಕೋರಿಕೆ ಮೇರೆ ಚಾಂಪಿಯನ್ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನು ಬಿಸಿಸಿಐ ಮೆಂಟರ್ ಎಂದು ನೇಮಕ ಮಾಡಿದರೂ ಅವರ ಸಲಹೆಗಳಿಗೆ ಕಿಮ್ಮತ್ತಿನ ಬೆಲೆ ಇಲ್ಲ. ಪರಿಣಾಮ ಗೆಲ್ಲುವಂಥ ಪಂದ್ಯಗಳನ್ನು ಸುಲಭವಾಗಿ ಕೈ ಚೆಲ್ಲಿದ್ದು.

ಇದೀಗ ಭಾರತದ ಸೆಮಿಸ್ ಹಾದಿ ಸುಗಮಗೊಳ್ಳಲು ಮುಂದಿನ ಎರಡೂ ಪಂದ್ಯಗಳನ್ನು ಭಾರಿ ಅಂತರದಿಂದ ಗೆಲ್ಲಬೇಕಿದ್ದು,ಜತೆಗೆ ಬದ್ಧ ವೈರಿ ಪಾಕಿಸ್ತಾನ ಮುಂದಿನ ಪಂದ್ಯದಲ್ಲಿ ಗೆಲ್ಲಬೇಕಿದೆ.ಜತೆಗೆ ನ್ಯೂಜಿಲ್ಯಾಂಡ್ ಮುಂದಿನ ಪಂದ್ಯದಲ್ಲಿ ಸೋಲಬೇಕಿದೆ.ಇದರಿಂದ ಮಾತ್ರ ಭಾರತದ ಸೆಮಿಸ್ ಹಾದಿ ಸುಗಮವಾಗಲಿದೆ ಎಂದು ಕ್ರಿಕೆಟ್ ಪಂಡಿಥ ಲೆಕ್ಕಾಚಾರ.

ಹಿರಿಯ ಹಾಗೂ ಮಾಜಿ ಆಟಗಾರರ ಆಕ್ರೋಶ, ಧೋನಿ ಕೊಹ್ಲಿ ನಡುವೆ ಇದೇ ವಿಶೇಷ ವ್ಯತ್ಯಾಸ. ಧೋನಿಯವರು ಹಿರಿಯ ಹಾಗೂ ಮಾಜಿ ಆಟಗಾರರ ಸಲಹೆಗಳನ್ನು ಗೌರವಿಸಿದರೆ,ಕೊಹ್ಲಿ ತಿರಸ್ಕರಿಸುವ ಮೂಲಕ ಎಡವಟ್ಟು ನಿರ್ಧಾರಗಳಿಗೆ ಕೈ ಹಾಕುತ್ತಿರುವುದೇ ತಂಡಕ್ಕೆ ಬಹು ದೊಡ್ಡ ಹಿನ್ನಡೆ. ಜತೆಗೆ ಡಿ.ಆರ್.ಎಸ್ ಬಳಕೆಯಲ್ಲಿಯೂ ವಿಫಲವಾಗುತ್ತಿರುವುದು ಕೂಡ ದುಬಾರಿಯಾಗುತ್ತಿದೆ.

ಏನೆ ಆಗಲಿ, ಮುಂದಿನ ಪಂದ್ಯಗಳಲ್ಲಿ ಕೊಹ್ಲಿ ಇಂತಹ ತಪ್ಪುಗಳನ್ನು ಪುನರಾವರ್ತಿಸದೆ ಇದ್ದರೆ ಹಾಗೂ ಅದೃಷ್ಟ ಕೈಗೂಡಿದರೆ ಮಾತ್ರ ವಿಶ್ವಕಪ್ ನಮ್ಮದಾಗಲಿದೆ ಎಂಬುದು ಸತ್ಯ.

# ಬಾಲಚಂದ್ರ ಕೋಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

2 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

2 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

17 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

18 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

23 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago