ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

March 4, 2022
2:36 PM

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ.

Advertisement
Advertisement

ಪ್ರಸ್ತುತ ದಿನಗಳಲ್ಲಿ ನೆಲ್ಯಾಡಿಯು ವ್ಯಾಪಾರ, ಕೃಷಿ ಚಟುವಟಿಕೆ, ಶಾಲಾ-ಕಾಲೇಜು ಹೀಗೆ ನಾನಾ ವಿಷಯದಲ್ಲಿ ಬೆಳೆದುನಿಂತ ಮುಖ್ಯ ಪೇಟೆಯಾಗಿದೆ. ಹೀಗಾಗಿ ಕೊಕ್ಕಡ , ಪುತ್ಯೆ, ಹಾರ ಪ್ರದೇಶದ ಜನರು ನೆಲ್ಯಾಡಿಯನ್ನು ಹೆಚ್ಚಿನ ವಹಿವಾಟುಗಳಿಗಾಗಿ ದಿನನಿತ್ಯ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿನ ಜನರು ಇದೇ ಪುತ್ಯೆ ಮಾರ್ಗವನ್ನು‌ ಬಳಸಿಕೊಂಡು ನೆಲ್ಯಾಡಿಗೆ ಹೋಗಬೇಕಾಗಿದೆ. ಆದರೆ ಸಂಚಾರಕ್ಕೆ ಮಾತ್ರಾ ಅಯೋಗ್ಯವಾಗಿದೆ.

ಈ ಭಾಗದ ರಸ್ತೆಯ ಮಧ್ಯದಲ್ಲಿ ಒಂದು ಸೇತುವೆ ಇದ್ದು, ಸೇತುವೆಯ ಒಂದು ಭಾಗ ಕಡಬ ತಾಲೂಕಿಗೆ ಸೇರಿದರೆ ಸೇತುವೆಯ ಇನ್ನೊಂದು ಭಾಗದ ರಸ್ತೆಯು ಬೆಳ್ತಂಗಡಿ ತಾಲೂಕಿಗೆ ಸೇರಿದೆ. ಪ್ರಸ್ತುತ ಈ ರಸ್ತೆಯು ಜಿಲ್ಲಾ ಪಂಚಾಯತ್ ರಸ್ತೆಯಿಂದ ಕಳೆದ ಐದು ತಿಂಗಳ ಹಿಂದೆಯೇ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ಹಾಗೂ ಈ ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ.

ಕರ್ನಾಟಕ ಕೇರಳದ ಗಡಿಭಾಗವಾದ ಸುಳ್ಯ ಸಮೀಪದ ಪೈಚಾರಿನಿಂದ ಆರಂಭಗೊಳ್ಳುವ ಈ ರಸ್ತೆಯು ಬೆಳ್ಳಾರೆ – ಸವಣೂರು- ಆಲಂಗಾರು – ನೆಲ್ಯಾಡಿ- ಕೊಕ್ಕಡ- ಪಟ್ರಮೆ -ಧರ್ಮಸ್ಥಳ – ಉಜಿರೆ- ಮುಂಡಾಜೆ ಮೂಲಕ ದಿಡುಪೆ ಸೇರಲಿದೆ. ರಸ್ತೆಯು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಕಾರಣ ಇಲ್ಲಿನ ಸ್ಥಳೀಯ ಆಡಳಿತಗಳು ಕೂಡ ಈ ರಸ್ತೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯನ್ನು ಪ್ರಶ್ನಿಸಿದರೆ ನಮಗೆ ಸರಕಾರದಿಂದ ಅನುದಾನ ದೊರೆತಿಲ್ಲ ಹಾಗಾಗಿ ಕಾಮಗಾರಿಯನ್ನು ಆರಂಭಿಸಲು ಆಗುವುದಿಲ್ಲ ಎನ್ನುತ್ತಾರೆ.

Advertisement

ಸರ್ಕಾರ, ಆಡಳಿತ ಎಲ್ಲವೂ ಇದ್ದರೂ ಇಚ್ಛಾಶಕ್ತಿ ಮಾತ್ರ ನಿಮ್ಮಲ್ಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮತಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳು ಈಗೊಂದು ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಇಲ್ಲಿನ ಜನರ ಕಷ್ಟ ಅರ್ಥ ಆದೀತು ಅನ್ನುವುದು ಇಲ್ಲಿನ ಜನರ ವಿಷಾದ.

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಮರ್ಥ ಸಮನ್ಯು

ಸಮರ್ಥ ಸಮನ್ಯು , - ಬರಹಗಾರರು, ವಿಮರ್ಶಕರು.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group