Advertisement
ಸುದ್ದಿಗಳು

ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

Share

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ.

ಪ್ರಸ್ತುತ ದಿನಗಳಲ್ಲಿ ನೆಲ್ಯಾಡಿಯು ವ್ಯಾಪಾರ, ಕೃಷಿ ಚಟುವಟಿಕೆ, ಶಾಲಾ-ಕಾಲೇಜು ಹೀಗೆ ನಾನಾ ವಿಷಯದಲ್ಲಿ ಬೆಳೆದುನಿಂತ ಮುಖ್ಯ ಪೇಟೆಯಾಗಿದೆ. ಹೀಗಾಗಿ ಕೊಕ್ಕಡ , ಪುತ್ಯೆ, ಹಾರ ಪ್ರದೇಶದ ಜನರು ನೆಲ್ಯಾಡಿಯನ್ನು ಹೆಚ್ಚಿನ ವಹಿವಾಟುಗಳಿಗಾಗಿ ದಿನನಿತ್ಯ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿನ ಜನರು ಇದೇ ಪುತ್ಯೆ ಮಾರ್ಗವನ್ನು‌ ಬಳಸಿಕೊಂಡು ನೆಲ್ಯಾಡಿಗೆ ಹೋಗಬೇಕಾಗಿದೆ. ಆದರೆ ಸಂಚಾರಕ್ಕೆ ಮಾತ್ರಾ ಅಯೋಗ್ಯವಾಗಿದೆ.

ಈ ಭಾಗದ ರಸ್ತೆಯ ಮಧ್ಯದಲ್ಲಿ ಒಂದು ಸೇತುವೆ ಇದ್ದು, ಸೇತುವೆಯ ಒಂದು ಭಾಗ ಕಡಬ ತಾಲೂಕಿಗೆ ಸೇರಿದರೆ ಸೇತುವೆಯ ಇನ್ನೊಂದು ಭಾಗದ ರಸ್ತೆಯು ಬೆಳ್ತಂಗಡಿ ತಾಲೂಕಿಗೆ ಸೇರಿದೆ. ಪ್ರಸ್ತುತ ಈ ರಸ್ತೆಯು ಜಿಲ್ಲಾ ಪಂಚಾಯತ್ ರಸ್ತೆಯಿಂದ ಕಳೆದ ಐದು ತಿಂಗಳ ಹಿಂದೆಯೇ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ಹಾಗೂ ಈ ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ.

ಕರ್ನಾಟಕ ಕೇರಳದ ಗಡಿಭಾಗವಾದ ಸುಳ್ಯ ಸಮೀಪದ ಪೈಚಾರಿನಿಂದ ಆರಂಭಗೊಳ್ಳುವ ಈ ರಸ್ತೆಯು ಬೆಳ್ಳಾರೆ – ಸವಣೂರು- ಆಲಂಗಾರು – ನೆಲ್ಯಾಡಿ- ಕೊಕ್ಕಡ- ಪಟ್ರಮೆ -ಧರ್ಮಸ್ಥಳ – ಉಜಿರೆ- ಮುಂಡಾಜೆ ಮೂಲಕ ದಿಡುಪೆ ಸೇರಲಿದೆ. ರಸ್ತೆಯು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಕಾರಣ ಇಲ್ಲಿನ ಸ್ಥಳೀಯ ಆಡಳಿತಗಳು ಕೂಡ ಈ ರಸ್ತೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯನ್ನು ಪ್ರಶ್ನಿಸಿದರೆ ನಮಗೆ ಸರಕಾರದಿಂದ ಅನುದಾನ ದೊರೆತಿಲ್ಲ ಹಾಗಾಗಿ ಕಾಮಗಾರಿಯನ್ನು ಆರಂಭಿಸಲು ಆಗುವುದಿಲ್ಲ ಎನ್ನುತ್ತಾರೆ.

ಸರ್ಕಾರ, ಆಡಳಿತ ಎಲ್ಲವೂ ಇದ್ದರೂ ಇಚ್ಛಾಶಕ್ತಿ ಮಾತ್ರ ನಿಮ್ಮಲ್ಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮತಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳು ಈಗೊಂದು ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಇಲ್ಲಿನ ಜನರ ಕಷ್ಟ ಅರ್ಥ ಆದೀತು ಅನ್ನುವುದು ಇಲ್ಲಿನ ಜನರ ವಿಷಾದ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಮರ್ಥ ಸಮನ್ಯು

ಸಮರ್ಥ ಸಮನ್ಯು , - ಬರಹಗಾರರು, ವಿಮರ್ಶಕರು.

Published by
ಸಮರ್ಥ ಸಮನ್ಯು

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago